ಹುಬ್ಬಳ್ಳಿ | ಹಳಿತಪ್ಪಿದ ಗೂಡ್ಸ್‌ ರೈಲು; ಕೆಲ ರೈಲುಗಳ ಸಂಚಾರ ಸ್ಥಗಿತ

Date:

Advertisements

ಹುಬ್ಬಳ್ಳಿ ವಿಭಾಗದ ವ್ಯಾಸನಕೇರಿ ಮತ್ತು ವ್ಯಾಸ ಕಾಲೋನಿ ರೈಲ್ವೆ ನಿಲ್ದಾಣದ ನಡುವೆ ನ.16ರ ಸಂಜೆ 4.08ಕ್ಕೆ ಗೂಡ್ಸ್‌ ರೈಲು ಹಳಿ ತಪ್ಪಿದ್ದರಿಂದ ಕೆಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಹಳಿ ಬಿಟ್ಟು ಕೆಳಗೆ ಇಳಿದಿರುವ ಬೋಗಿಗಳನ್ನು ಸರಿಪಡಿಸಲು ತಂಡವನ್ನು ಕಳುಹಿಸಿಕೊಡಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಹೊಸಪೇಟೆ, ಹರಿಹರ ಪ್ಯಾಸೆಂಜರ್ ವಿಶೇಷ ರೈಲು ಸಂಚಾರವನ್ನು ನವೆಂಬರ್ 17, 18ರಂದು ರದ್ದುಮಾಡಲಾಗಿದೆ. ಹರಿಹರ-ಹೊಸಪೇಟೆ ಪ್ಯಾಸೆಂಜರ್ ವಿಶೇಷ ರೈಲು ಸಂಚಾರವನ್ನು ನವೆಂಬರ್ 17ರಿಂದ ಮೂರು ದಿನಗಳ ಕಾಲ ರದ್ದುಮಾಡಲಾಗಿದೆ.

ಬಳ್ಳಾರಿ-ಹರಿಹರ-ಬಳ್ಳಾರಿ ಡೆಮೋ ವಿಶೇಷ ರೈಲು, ಹೊಸಪೇಟೆ-ಬಳ್ಳಾರಿ-ಹೊಸಪೇಟೆ ಡೆಮೋ ವಿಶೇಷ ರೈಲು ಸಂಚಾರವನ್ನು ನವಂಬರ್ 17, 18ರಂದು ರದ್ದು ಮಾಡಲಾಗಿದೆ. ಯಶವಂತಪುರ-ವಿಜಯಪುರ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಮಾರ್ಗವನ್ನು ಬದಲಾಯಿಸಿ, ಹೊಸಪೇಟೆ, ಬಳ್ಳಾರಿ, ದಂಡುಪ್ರದೇಶ, ರಾಯದುರ್ಗ, ಚಿಕ್ಕಜಾಜೂರು ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

Advertisements

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಮತ್ತು ರೈಲ್ವೆಯ ವಿವಿಧ ವಿಭಾಗಗಳ ಮುಖ್ಯಸ್ಥರು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X