ಬೆಂಗಳೂರು | ನಿಯಮ ಉಲ್ಲಂಘಿಸಿ ಪಟಾಕಿ ಸಿಡಿಸಿದ 305 ಮಂದಿ ವಿರುದ್ಧ ದೂರು ದಾಖಲು

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಪೊಲೀಸ್ ಇಲಾಖೆ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚುವಾಗ ಮುನ್ನೆಚ್ಚರಿಕೆ ವಹಿಸಿ ಜತೆಗೆ ಸುಪ್ರೀಂ ಕೋರ್ಟ್‌ ನೀಡಿದ ಆದೇಶಗಳನ್ನು ಪಾಲಿಸಿ, ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿತ್ತು. ಇದೀಗ ನಗರದಲ್ಲಿ ನಿಯಮ ಉಲ್ಲಂಘಿಸಿ ಪಟಾಕಿ ಸಿಡಿಸಿದ 305 ಮಂದಿ ವಿರುದ್ಧ ದೂರು ದಾಖಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ರಾಸಾಯನಿಕ ಪಟಾಕಿಗಳನ್ನು ಮಾರಾಟ ಮಾಡಿದವರ ವಿರುದ್ಧ 19 ಪ್ರಕರಣ ದಾಖಲಾಗಿದೆ.

ಹೆಗಡೆನಗರ, ಸಂಪಿಗೆಹಳ್ಳಿ, ಕೊರಮಂಗಲ, ಬೇಗೂರು, ಕೊತ್ತನೂರು, ಅಮೃತಹಳ್ಳಿ ಸೇರಿದಂತೆ ಬೆಂಗಳೂರಿನ ನಾನಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ಸುಪ್ರೀಂ ಕೋರ್ಟ್ ಆದೇಶದಂತೆ ದೀಪಾವಳಿ ಸಮಯದಲ್ಲಿ ರಾತ್ರಿ 8 ರಿಂದ 10 ಗಂಟೆಯ ಒಳಗೆ ಪಟಾಕಿ ಸಿಡಿಸಬೇಕು ಎಂದು ಆದೇಶ ನೀಡಿತ್ತು. ಈ ನಿಯಮ ಪಾಲನೆ ಮಾಡಲು ಬೆಂಗಳೂರು ನಗರ ಪೊಲೀಸ್ ಮತ್ತು ಬಿಬಿಎಂಪಿ ಸೂಚಿಸಿತ್ತು. ನ. 10ರಿಂದ 14ರವರೆಗೆ ನಗರದಲ್ಲಿ ಹಲವೆಡೆ ಎಸಿಪಿ ನೇತೃತ್ವದ ಕಾರ್ಯಪಡೆ ಸಂಚರಿಸಿದೆ. ಅವಧಿ ಮೀರಿ ಪಟಾಕಿ ಸಿಡಿಸಿದ್ದ 305 ಮಂದಿ ವಿರುದ್ಧ ದೂರು ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೃಷಿ ಮೇಳಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು. ಇಂಥ ಸ್ಥಳಗಳ ಮೇಲೆ ದಾಳಿ ಮಾಡಿದ ಪೊಲೀಸರು ಪಟಾಕಿ ಜಪ್ತಿ ಮಾಡಿದ್ದಾರೆ. ಜತೆಗೆ, ಪಟಾಕಿ ಮಾರುತ್ತಿದ್ದವರ 19ಜನರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X