ವಿಶ್ವಕಪ್ ಫೈನಲ್ ಪಂದ್ಯ ಬಂಡವಾಳ ಮಾಡಿಕೊಂಡ ವಿಮಾನಯಾನ ಸಂಸ್ಥೆ, ಹೋಟೆಲ್‌ಗಳು: ಟಿಕೆಟ್, ಕೊಠಡಿ ಬಾಡಿಗೆ ಹತ್ತು ಪಟ್ಟು ಹೆಚ್ಚಳ

Date:

Advertisements

ಗುಜರಾತಿನ ಅಹಮದಾಬಾದಿನಲ್ಲಿ ನ.19ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್‌ ಪಂದ್ಯ ನಡೆಯಲಿದೆ. ಟ್ರೋಫಿ ಯಾರು ಗೆಲ್ಲುತ್ತಾರೆಂದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಕ್ರೀಡಾ ಹಬ್ಬಕ್ಕೆ ಭಾನುವಾರ ರಾತ್ರಿ ತೆರೆ ಬೀಳಲಿದೆ.

ಲಕ್ಷಕ್ಕೂ ಹೆಚ್ಚು ಮಂದಿ ಸಾಮರ್ಥ್ಯವಿರುವ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣ ಈಗಾಗಲೇ ಸಂಪೂರ್ಣವಾಗಿ ಭರ್ತಿಯಾಗಿದೆ. ಹಲವು ಕ್ರಿಕೆಟ್ ತಾರೆಗಳು, ಸಿನಿಮಾ ದಿಗ್ಗಜರಲ್ಲದೆ ಭಾರತ ಹಾಗೂ ಆಸ್ಟ್ರೇಲಿಯಾ ಪ್ರಧಾನಿಗಳು ಈ ಪಂದ್ಯವನ್ನು ವೀಕ್ಷಿಸುವ ಸಾಧ್ಯತೆಯಿದೆ.

ಟೀಂ ಇಂಡಿಯಾ ವಿಶ್ವಕಪ್ ಫೈನಲ್‌ ಪ್ರವೇಶಿಸಿರುವ ಪಂದ್ಯವನ್ನು ಕ್ರೀಡಾಂಗಣದಲ್ಲಿ ಕೂತು ನೋಡಬೇಕೆಂದು ಕ್ರೀಡಾ ಪ್ರೇಮಿಗಳು ಹಂಬಲಿಸುವುದು ಸಹಜ. ಇದನ್ನೇ ಬಂಡವಾಳ ಮಾಡಿಕೊಂಡಿರುವ ವಿಮಾನಯಾನ ಸಂಸ್ಥೆಗಳು ಹಾಗೂ ಹೋಟೆಲ್‌ಗಳು ಟಿಕೆಟ್‌ ಹಾಗೂ ಕೊಠಡಿ ಬಾಡಿಗೆಯ ಬೆಲೆಯನ್ನು ಹತ್ತು ಪಟ್ಟು ಹೆಚ್ಚಿಸಿವೆ.

Advertisements

ಈ ಸುದ್ದಿ ಓದಿದ್ದೀರಾ? ರಚಿನ್‌ ರವೀಂದ್ರ ರೀತಿ ಶ್ರೇಯಸ್‌ ಅಯ್ಯರ್‌ಗೂ ಕೂಡ ಇದೆ ಕರ್ನಾಟಕದ ನಂಟು

ಬೆಂಗಳೂರಿನಿಂದ ಅಹಮದಾಬಾದಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸಲು ಸಾಮಾನ್ಯ ವಿಮಾನಯಾನ ದರ 5 ರಿಂದ 10 ಸಾವಿರ ರೂ. ಇರುತ್ತದೆ. ಆದರೆ ನವೆಂಬರ್‌ 18 ಮತ್ತು 19 ರಂದು ಈ ದರವನ್ನು 30 ರಿಂದ 40 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಇದು ಒಂದು ಬಾರಿ ತೆರಳುವ ಏಕಮುಖ ಸಂಚಾರ ದರವಾಗಿದ್ದು, ವಾಪಸ್‌ ಆಗಮಿಸಬೇಕೆಂದರೆ ಮುಂದಿನ ಎರಡು ದಿನಗಳಲ್ಲಿ ದರವು ಅಷ್ಟೆ ಪ್ರಮಾಣದಲ್ಲಿದೆ.

ಇದು ಬೆಂಗಳೂರಿನಿಂದ ಮಾತ್ರವಲ್ಲ ಇತರ ಮೆಟ್ರೋ ನಗರಗಳಾದ ಕೋಲ್ಕತ್ತಾ, ಮುಂಬೈ, ದೆಹಲಿ ಹಾಗೂ ಚೆನ್ನೈನಿಂದ ಕೂಡ ಟಿಕೆಟ್ ದರವನ್ನು ವಿಪರೀತ ಏರಿಸಲಾಗಿದೆ ಎಂದು ಕ್ರೀಡಾ ಪ್ರೇಮಿಗಳು ಅಳಲು ತೋಡಿಕೊಂಡಿದ್ದಾರೆ.

ಇದೇ ರೀತಿ ಅಹಮದಾಬಾದಿನ ಹೋಟೆಲ್‌ಗಳ ಬಾಡಿಗೆ ದರವನ್ನು ಹಲವು ಪಟ್ಟು ಏರಿಸಲಾಗಿದೆ. ಸಾಮಾನ್ಯವಾಗಿ ಅಹಮದಾಬಾದ್‌ನಲ್ಲಿ ಐಷಾರಾಮಿ ಹೋಟೆಲ್ ಕೊಠಡಿ ಬೆಲೆ (ಒಂದು ರಾತ್ರಿಗೆ) ಸುಮಾರು 10 ಸಾವಿರ ರೂಪಾಯಿ ಇರುತ್ತದೆ. ಆದರೆ ಸದ್ಯ ಫೋರ್ ಸ್ಟಾರ್ ಮತ್ತು ಫೈವ್ ಸ್ಟಾರ್ ಹೋಟೆಲ್‌ಗಳ ಬೆಲೆಗಳು ಬೆಚ್ಚಿ ಬೀಳಿಸುವಂತಿವೆ.

ಒಂದು ಕೊಠಡಿ ಬಾಡಿಗೆಗೆ ಪಡೆಯಲು ರಾತ್ರಿಗೆ ರೂ.1 ಲಕ್ಷ ರೂ.ವರೆಗೂ ಪಾವತಿಸಬೇಕಿದೆ. ಇತರೆ ಐಷಾರಾಮಿ ಹೋಟೆಲ್ ಮಾಲೀಕರು 24 ಸಾವಿರದಿಂದ 2 ಲಕ್ಷದ 15 ಸಾವಿರ ರೂ.ವರೆಗೂ ವಸೂಲಿ ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X