ಕಲಬುರಗಿ | ಸಾಂಬರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿ ಗಾಯ; ಇಬ್ಬರು ಶಿಕ್ಷಕರ ಅಮಾನತು

Date:

Advertisements

ಶಾಲೆಯಲ್ಲಿ ಬಿಸಿಯೂಟಕ್ಕಾಗಿ ತಯಾರಿಸಿದ್ದ ಸಾಂಬರ್ ಪಾತ್ರೆಗೆ 7 ವರ್ಷದ ವಿದ್ಯಾರ್ಥಿನಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಕರಣದಲ್ಲಿ ಮುಖ್ಯಶಿಕ್ಷಕಿ ಮತ್ತು ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಗಗೇರಾ ಗ್ರಾಮದ ಶಾಲೆಯಲ್ಲಿ ಗುರುವಾರ ಘಟನೆ ನಡೆದಿತ್ತು. ಘಟನೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಶಾಲೆಯ ಮುಖ್ಯಶಿಕ್ಷಕಿ ಲಾಲಬಿ ನಾದಾಫ್ ಹಾಗೂ ಸಹಶಿಕ್ಷಕ ರಾಜು ಚವ್ಹಾಣ ಅವರನ್ನು ಅಮಾನತು ಮಾಡಿ ಕಲಬುರಗಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದರ ಆದೇಶ ಹೊರಡಿಸಿದ್ದಾರೆ.

ಊಟದ ಸಮಯದಲ್ಲಿ ವಿದ್ಯಾರ್ಥಿನಿ ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ, ಆಕೆ ಆಯತಪ್ಪಿ ಸಾಂಬರ್ ಪಾತ್ರೆಗೆ ಬಿದ್ದಿದ್ದಾಳೆ. ಆಕೆಯನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X