ಕಲಬುರಗಿ | ಬರ ಅಧ್ಯಯನ ನಡೆಸಿದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ

Date:

Advertisements

ಕಲಬುರಗಿ ಜಿಲ್ಲೆಯ ಸೇಡಂ‌ ತಾಲೂಕಿನಲ್ಲಿ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ರೈತರ ಜಮೀನುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ.

ಸೇಡಂ ತಾಲೂಕಿನ ಕೊಡ್ಲಾ, ಸೇಡಂ, ಮೊತಕಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದ ಜೆಡಿಎಸ್‌ ಮುಖಂಡರು ಮಳೆ ಕೊರತೆಯಿಂದ ಹಾಳಾದ ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿ, ರೈತರೊಂದಿಗೆ ಚರ್ಚಿಸಿದ್ದಾರೆ.

ಬೆಳೆ ವೀಕ್ಷಣೆ ನಡೆಸಿ ಮಾತನಾಡಿದ ಬಾಲರಾಜ್ ಗುತ್ತೇದಾರ, “ಮಳೆಯ ಕೊರತೆಯಿಂದಾಗಿ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ ಬೆಳೆ ಚನ್ನಾಗಿ ಮೊಳಕೆ ಬಂದಿದೆಯಾದರು ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಫಲಕ್ಕೆ ಬರಬೇಕಾದ ಬೆಳೆ ಕೈಕೊಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ನಾನು ಈಗಾಗಲೇ ಸೇಡಂ ಮತಕ್ಷೇತ್ರದ ರೈತರೊಂದಿಗೆ ಚರ್ಚಿಸಿದೆನೆ . ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಬಹುತೇಕ ರೈತರು ದುಃಖ ವ್ಯಕ್ತಪಡಿಸಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಳೆ ವಿಮೆ ಕೂಡ ಸರಿಯಾಗಿ ತಲುಪುತ್ತಿಲ್ಲ‌. ಎಲ್ಲಾ ರೀತಿಯಿಂದಲೂ ರೈತರು ಸಂಕಷ್ಟದಲ್ಲಿದ್ದೇವೆ. ಸರ್ಕಾರದ ನೆರವು ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಬಾಲರಾಜ್ ಗುತ್ತೇದಾರ ಹೇಳಿದರು.

ರೈತರೊಂದಿಗೆ ಸಂವಾದ ನಡೆಸಿ ಬರ ಅಧ್ಯಯನದ ವೇಳೆಯಲ್ಲಿ ವಿವಿಧೆಡೆ ರೈತರ ಹೊಲಗಳಿಗೆ ತೆರಳಿ ರೈತರೊಂದಿಗೆ ಸಂವಾದ ನಡೆಸಿದರು. ರೈತರು ಎದುರಿಸುತ್ತಿರುವ ಸಮಸ್ಯೆಗಳು, ಅವರ ಬೆಳೆಗಳ ಸ್ಥಿತಿಗತಿಯ ಬಗ್ಗೆ ರೈತರಿಂದಲೇ ಮಾಹಿತಿ ಪಡೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X