ರಾಯಚೂರು | ಬರ ಪರಿಹಾರ ವಿಚಾರದಲ್ಲಿ ರೈತರಿಗೆ ಮಲತಾಯಿ ಧೋರಣೆ: ಎಐಕೆಕೆಎಸ್

Date:

Advertisements

ರಾಜ್ಯ ಸರಕಾರ ಬರಗಾಲ ಘೋಷಿಸಿ ಹಣ ಬಿಡುಗಡೆ ಮಾಡಿದರೂ ರೈತರ ಖಾತೆಗೆ ಹಣ ಜಮೆಯಾಗದ ಪರಿಣಾಮ ರೈತರು ಕಂಗಾಲಾಗಿದ್ದಾರೆ. ರೈತರ ಬಗ್ಗೆ ಸರಕಾರ ಮಲತಾಯಿ ಧೋರಣೆ ತಾಳುತ್ತಿದೆ. ಶೀಘ್ರವೇ ಬರಗಾಲ ಪರಿಹಾರ ಧನ ನೀಡಬೇಕೆಂದು ಎಐಕೆಕೆಎಸ್ ಒತ್ತಾಯಿಸಿದೆ.

ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಮರಿ ಹೋದ ಬೆಳೆಗಳನ್ನು ಪ್ರದರ್ಶಿಸಿದ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಜಿಲ್ಲೆಯ ದೇವದುರ್ಗ, ಮಾನ್ವಿ, ಸಿಂಧನೂರು, ಮಸ್ಕಿ, ಸಿರವಾರ, ಲಿಂಗಸುಗೂರು ಮತ್ತು ರಾಯಚೂರು ತಾಲೂಕುಗಳಲ್ಲಿ ಸಕಾಲಕ್ಕೆ ಮುಂಗಾರು ಮತ್ತು ಹಿಂಗಾರು ಮಳೆಯಾಗದ ಕಾರಣ ರೈತರು ತಮ್ಮ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೆಳೆಗಳು ಬಿಸಿಲಿಗೆ ಕಮರಿ ಹೋಗುತ್ತಿವೆ. ಇದರಿಂದ ಸರಕಾರಿ ಮತ್ತು ಸಹಕಾರಿ ಬ್ಯಾಂಕ್‍ಗಳಲ್ಲಿ ಸಾಲ ಮಾಡಿದ ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುವ ಪರಿಸ್ಥತಿ ಬಂದೊದಗಿದೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

Advertisements

“ಸಾಲ ವಸೂಲಿಗೆ ಬ್ಯಾಂಕ್ ಅಧಿಕಾರಿಗಳು ರೈತರ ಮನೆ ಮನೆಗೆ ಅಲೆಯುತ್ತಿದ್ದಾರೆ. ಮೊದಲೇ ಬರಗಾಲದಿಂದ ಕಂಗಾಲಾದ ರೈತ ಸಾಲ ತೀರಿಸಲು ಅಸಾಧ್ಯವಿದೆ. ಖಾಸಗಿ ಮತ್ತು ಬ್ಯಾಂಕಿನವರು ಸಾಲ ಮರು ಪಾವತಿಸದಿದ್ದರೆ ಮನಬಂದಂತೆ ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಮಳೆ ಕೊರತೆಯಿಂದ ಬೆಳೆಗಳು ಸಂಪೂರ್ಣ ನಷ್ಟವಾದರೂ ಕೇಂದ್ರ ಸರಕಾರ ಬರಗಾಲ ಘೋಷಿಸದೇ ಇರುವುದು ರೈತರಿಗೆ ಮಾಡಿರುವ ದ್ರೋಹವಾಗಿದೆ. ಕೂಡಲೇ ಕೇಂದ್ರ ಸರಕಾರ ಬರಗಾಲ ಘೋಷಿಸಿ ಪರಿಹಾರ ಒದಗಿಸಬೇಕೆಂದು” ಆಗ್ರಹಿಸಿದರು.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕು. ಮಳೆ ಅಭಾವದಿಂದಾಗಿ ತೊಗರಿ, ಶೇಂಗಾ, ಕಬ್ಬು ಹಾಗೂ ಇನ್ನಿತರ ಬೆಳೆ ಬೆಳೆದ ರೈತರು ನೀರಿಲ್ಲದೆ ಪರದಾಡುವಂತಾಗಿದೆ. ನೀರಾವರಿ ಸೌಲಭ್ಯ ಹೊಂದಿರುವ ಕಷಿಕರಿಗೂ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ ಎಂದು ಹೇಳಿದರು.

“ಉದ್ಯೋಗ ಖಾತ್ರಿ ಯೋಜನೆಯನ್ನು ವರ್ಷಪೂರ್ತಿ ವಿಸ್ತರಿಸಬೇಕು. ರೈತರು ಗುಳೆ ಹೋಗುವುದು ತಪ್ಪಿಸಬೇಕು. ಬರಪೀಡಿತ ಗ್ರಾಮಗಳಲ್ಲಿ ಉಚಿತ ಶುದ್ಧ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ನೀರು ಮತ್ತು ಮೇವಿನ ವ್ಯವಸ್ಥೆ ಮಾಡಬೇಕು. ಶಾಲಾ-ಕಾಲೇಜು ಮಕ್ಕಳ ಶಾಲಾ ಶುಲ್ಕ ಮನ್ನಾ ಮಾಡಬೇಕು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ವರ್ಷವಿಡೀ ಉಚಿತ ಪಡಿತರ ನೀಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಕೆರೆ ಜೋಡಣೆ ಯೋಜನೆ ಜಾರಿಗೊಳಿಸಿ ಶಾಶ್ವತವಾಗಿ ನೀರಿನ ಸಮಸ್ಯೆ ಮುಕ್ತಿಗೊಳಿಸಬೇಕು” ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಜನತೆ ಬರಗಾಲದಿಂದ ತತ್ತರಿಸಿದ್ದಾರೆ. ಗ್ರಾಮೀಣ ಭಾಗದ ಜನರು ಕೆಲಸ ಕಾರ್ಯಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ‌ ವೇಳೆ ರಾಜ್ಯದ ಸಚಿವರು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ನಿರತರಾಗಿದ್ದಾರೆ. ಆದರೆ ತಮ್ಮ ರಾಜ್ಯದ ಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿ‌ ಇಲ್ಲದಂತಾಗಿದೆ ಎಂದು ಕಿಡಿಕಾರಿದರು. ಕೂಡಲೇ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಮಾಡದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಬೇಡಿಕೆಗಳು:
1.ರಾಜ್ಯದಲ್ಲಿ ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬರ ಪರಿಹಾರ ಕೊಡಬೇಕು.
2.ಕೇಂದ್ರದಿಂದ ಬರ ಪರಿಹಾರ ಪ್ರತಿ ಎಕರೆಗೆ 50 ಸಾವಿರ ರೂ. ಗಳಂತೆ ನಿಗದಿಗೊಳಿಸಿ, ರಾಜ್ಯ ಸರಕಾರ 30 ಸಾವಿರ ಹಣ ಬಿಡುಗಡೆ ಮಾಡಬೇಕು.
3.ಸಹಕಾರಿ ಬ್ಯಾಂಕ್‍ಗಳು, ಸರಕಾರಿ ಬ್ಯಾಂಕ್‍ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು.
4.ರೈತರು ಬೆಳೆದು, ಮಳೆಯಿಂದ ಅಥವಾ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು.
5.ರಾಜ್ಯ ಸರಕಾರವು ರೈತರಿಗೆ ಗ್ಯಾರಂಟಿ ಕೊಡಬೇಕು.
6.ಮನರೇಗಾ ಯೋಜನೆಯ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘ ಜಿಲ್ಲಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ ಸೇರಿದಂತೆ ಪ್ರಮುಖರಾದ ಜಿ.ಅಂಬರೀಶ್, ಅಜೀಜ್ ಜಾಗೀರ್ದಾರ್, ಕೆ. ಗಿರಿಲಿಂಗ ಸ್ವಾಮಿ, ಶಿವರಾಂ, ಅಡಿವೆಪ್ಪ, ಶಫೀಕ್ ಪಾಷಾ, ಸಿದ್ದಲಿಂಗಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X