ಬೆಂಗಳೂರು | ಕಿಚಾಯಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿದ ಆರೋಪಿಗಳ ಬಂಧನ

Date:

Advertisements

ಪಾರ್ಟಿ ಮಾಡುತ್ತಿದ್ದಾಗ ಮಾತಿನ ನಡುವೆ ಕಿಚಾಯಿಸಿದ್ದಕ್ಕೆ ಸ್ನೇಹಿತನನ್ನೆ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಲಕ್ಷ್ಮಣ್ ಮಾಂಜಿ (22) ಹತ್ಯೆಯಾದ ವ್ಯಕ್ತಿ. ಜಗದೇವ್ ಮತ್ತು ಚಂದನ್ ಕುಮಾರ್ ಬಂಧಿತರು. ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಲಸನಹಳ್ಳಿಯ ಖಾಲಿ ಜಾಗದ ಪೊದೆಗಳ ನಡುವೆ ನ.16 ರಂದು ಶವ ಪತ್ತೆಯಾಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Advertisements

ಏನಿದು ಪ್ರಕರಣ?

ಕೊಲೆಯಾದ ಮಾಂಜಿ ಮತ್ತು ಇಬ್ಬರು ಆರೋಪಿಗಳು ಬೆಂಗಳೂರಿಗೆ ಕೂಲಿ ಕೆಲಸ ಅರಸಿ ಬಂದಿದ್ದರು. ನಗರದ ಭೈರತಿಯಲ್ಲಿ ವಾಸವಾಗಿದ್ದರು. ಈ ಮೂವರು ಮೂಲತಃ ಜಾರ್ಖಂಡದವರು.

ಕೊಲೆಯಾದ ಲಕ್ಷ್ಮಣ ಯಾವಾಗಲೂ ಮಾತಿನ ನಡುವೆ ಗೆಳೆಯರ ಕಾಲು ಎಳೆದು ಮಾತಾಡುವ ಸ್ವಭಾವ ಹೊಂದಿದ್ದನು. ನ.16 ರಂದು ಮೂವರು ಸ್ನೇಹಿತರು ಸೇರಿ ಪಾರ್ಟಿಗೆ ಮಾಡುತ್ತಿದ್ದರು.

ಈ ವೇಳೆ, ಲಕ್ಷ್ಮಣ ಇಬ್ಬರು ಸ್ನೇಹಿತರನ್ನು ಕಿಚಾಯಿಸಿದ್ದನು. ಈ ವಿಚಾರವಾಗಿ ಮೂವರ ನಡುವೆ ಜಗಳವಾಗಿತ್ತು. ಬಳಿಕ, ಆರೋಪಿಗಳು ಲಕ್ಷ್ಮಣನನ್ನು ಖಾಲಿ ಜಾಗವೊಂದಕ್ಕೆ ಕರೆದುಕೊಂಡು ಹೋಗಿ ಇಟ್ಟಿಗೆಯಿಂದ ಆತನ ತಲೆಗೆ ಹೊಡೆದು ಕೊಲೆ ಮಾಡಿ ಜಾರ್ಖಂಡ್‌ಗೆ ಪರಾರಿಯಾಗಲು ಯತ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶುಲ್ಕ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಗೆ ಕಾರು ಗುದ್ದಿದ ಚಾಲಕ

ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಕೊತ್ತನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶ್ವಥ್ ನಾರಾಯಣಸ್ವಾಮಿ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ರೈಲಿನ ಮೂಲಕ ಪರಾರಿಯಾಗಲು ಯತ್ನಿಸುತ್ತಿದ್ದ ಜಗದೇವ್ ಹಾಗೂ ಚಂದನ್ ಕುಮಾರ್​ನನ್ನು ಬಂಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X