ವಿಜಯಪುರ | ನ. 19ರಿಂದ 25ರವರೆಗೆ ʼಶಾಂತಿ ಸೌಹಾರ್ದತೆ ಸಹಬಾಳ್ವೆʼ ಅಭಿಯಾನ

Date:

Advertisements

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ, ವಿಜಯಪುರ ಘಟಕ, ʼಶಾಂತಿ ಸೌಹಾರ್ದತೆ ಸಹಬಾಳ್ವೆ ನಮ್ಮ ಪರಂಪರೆ ಅದನ್ನು ಉಳಿಸೋಣ ಮತ್ತು ಬೆಳೆಸೋಣ’ ಎಂಬ ಘೋಷವಾಕ್ಯದಡಿಯಲ್ಲಿ ನ.19ರಿಂದ 25ರವರೆಗೆ ಅಭಿಯಾನವನ್ನು ಹಮ್ಮಿಕೊಂಡಿದೆ.

ಈ ಕುರಿತು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ಅಧ್ಯಕ್ಷ ಅಬ್ದುಲ್ ಅಮಿದ್ ಜಾವೇದ್ ಮಾತನಾಡಿ, ‘ಈ ಅಭಿಯಾನದ ಮುಖಾಂತರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ವಾತಾವರಣ ನಿರ್ಮಿಸಲು ಸಾಧ್ಯ ಎಂಬ ಧೋರಣೆ ಮೂಡಿಸುವು ಆಶಯ ನಮ್ಮದು. ಭಾರತವು ಹಲವು ರಾಜ್ಯ, ಭಾಷೆ, ಧರ್ಮ ಹಾಗೂ ಸಂಸ್ಕೃತಿಯ ಬೀಡು. ಏಕಸಂಸ್ಕೃತಿ ಈ ದೇಶಕ್ಕೂ ಹಾಗೂ ರಾಜ್ಯಕ್ಕೂ ಅನ್ಯವಾಗಿದೆ. ವಿವಿಧತೆಯಲ್ಲಿ ಏಕತೆ ನಮ್ಮ ದೇಶದ ವಿಶೇಷತೆ’ ಎಂದರು.

‘ಪ್ರತಿ 10 ಕಿ.ಮೀಗೆ ವೈವಿಧ್ಯಮಯವಾದ ಸಂಸ್ಕೃತಿಯನ್ನು ನಾವು ಕಾಣಬಹುದು. ಬಹು ಸಂಸ್ಕೃತಿ ಈ ದೇಶದ ಜೀವಾಳ. ಇಲ್ಲಿನ ಭಿನ್ನತೆಯನ್ನು ಎತ್ತಿ ಹಿಡಿದು ಅದರಲ್ಲಿ ಸೌಹಾರ್ದತೆಯ, ಸಹಬಾಳ್ವೆಯ ಪಾಠಗಳನ್ನು ಹುಡುಕುವ ಮೂಲಕ ಒಂದು ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.

Advertisements

‘ವಿಚಾರ ಸಂಕಿರಣ, ಜನಜಾಗೃತಿ, ಚಾವಡಿ ಚರ್ಚೆ ಮುಂತಾದ ಹಲವಾರು ಕಾರ್ಯಕ್ರಮಗಳ ಮೂಲಕ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಎಲ್ಲಾ ಸಮಾನಮನಸ್ಕರು ಅಭಿಯಾನದಲ್ಲಿ ಭಾಗವಹಿಸಿ’ ಎಂದು  ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X