ವಿಜಯಪುರ | ವಸತಿ ನಿಲಯದ ಅವ್ಯವಸ್ಥೆ; ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ

Date:

Advertisements

ವಸತಿ ನಿಲಯದ ಅಡುಗೆ ಸಿಬ್ಬಂದಿ ಮತ್ತು ಅಧಿಕಾರಿಗಳ ಅವ್ಯವಸ್ಥೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ಈ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ  ಪರಿಷತ್ ಮುಖಂಡರಾದ ಅಕ್ಷಯ್ ಕುಮಾರ ಅಜಮನಿ, ‘ವಿಜಯಪುರ ನಗರದಲ್ಲಿರುವ ಹಿಂದುಳಿದ ವರ್ಗಗಳ  ಕಲ್ಯಾಣ ಇಲಾಖೆ ಅಧೀನದಲ್ಲಿರುವ, ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನೀಲಯದ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ ಮತ್ತು ದುರ್ನಡತೆ ತೋರಿದ್ದಾರೆ’ ಎಂದರು.

‘ಒಂದು ವಾರ ವಿದ್ಯಾರ್ಥಿಗಳಿಗೆ ಅಡುಗೆ ಮಾಡದೇ ಉಪವಾಸ ಇರುವ ಹಾಗೆ ಮಾಡಿದ್ದಾರೆ. ಮೊದಲೂ ಅದೇ ವಸತಿ ನಿಲಯದಲ್ಲಿ ಇದ್ದ ಹುಲಗಪ್ಪ ಛಲವಾದಿ ಎಂಬ ಹೊರಗುತ್ತಿಗೆ ನೌಕರನನ್ನು ಹಲವು ಆರೋಪಗಳ ಮೇಲೆ ಬೇರೆ ವಸತಿ ನಿಲಯಕ್ಕೆ ವರ್ಗಾವಣೆ  ಮಾಡಲಾಗಿತ್ತು. ಆದ್ದರಿಂದ ಅವರು ದುರುದ್ದೇಶ ಇಟ್ಟುಕೊಂಡು ವಸತಿ ನಿಲಯಕ್ಕೆ ನುಗ್ಗಿ ಅಡುಗೆ ಮಾಡುತ್ತಿರುವ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಬೆದರಿಸಿ ನಿಲಯದಿಂದ ಅಡುಗೆ ಮಾಡುವವರನ್ನು ಕರೆದುಕೊಂಡು ಹೋಗಿ, ವಿದ್ಯಾರ್ಥಿಗಳಿಗೆ ಊಟ ಇಲ್ಲದ ಹಾಗೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

Advertisements

‘ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಅವರು ಸ್ಪಂದನೆ ನೀಡದೆ, ಯಾವುದೇ ಪರಿಶೋಧನೆ ಮಾಡದೆ ಬೇಜವಾಬ್ದಾರಿ ತೋರಿದ್ದಾರೆ. ಈ ಘಟನೆಗೆ ಕಾರಣರಾದ ಹುಲಗಪ್ಪ ಛಲವಾದಿ, ಲಕ್ಷ್ಮೀ ಛಲವಾದಿ, ಯಲ್ಲಮ್ಮ, ಜುಲೇಖಾ ಎಂಬ ಮೂರು ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿರ್ವಹಿಸದೆ, ಪದೆ ಪದೆ ವಿದ್ಯಾರ್ಥಿಗಳಿಗೆ  ಕಿರುಕುಳ ಮತ್ತು ಹಿಂಸೆ ನೀಡುತ್ತಿದ್ದಾರೆ. ಇವರನ್ನು ಕೆಲಸದಿಂದ ವಜಾ ಮಾಡಿ ಬೇರೆ ಸಿಬ್ಬಂದಿಯನ್ನು ಅಯ್ಕೆ ಮಾಡಿ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಿ. ಹಾಗೆಯೇ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನ ಈಡೇರಿಸಬೇಕು’ ಎಂದು ವಿಜಯಪುರ ಜಿಲ್ಲಾಧಿಕಾರಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ಮನವಿ ಸಲ್ಲಿಸಿದೆ.

ಈ ಸಂದರ್ಭದಲ್ಲಿ  ಸಯ್ಯದ್ ಸುಬೇದಾರ್, ದೀಪಕ್, ಸತೀಶ್ ಇಮ್ಮನದ, ಮುತ್ತು ಛಲವಾದಿ, ಸಲೀಂ ಅಹ್ಮದ್, ಸತೀಶ್ ಅಂಜುಟಗಿ ಮತ್ತು ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X