ವಿಶ್ವಕಪ್ | ಭಾರತದ ಪರದಾಟ; 97 ಚೆಂಡುಗಳ ನಂತರ ಬೌಂಡರಿ ದಾಖಲಿಸಿದ ಟೀಮ್ ಇಂಡಿಯಾ

Date:

Advertisements

ಅಹಮದಾಬಾದಿನ ಮೊಟೇರಾದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ – ಆಸ್ಟ್ರೇಲಿಯಾ ನಡುವಣ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಬ್ಯಾಟಿಂಗ್ ಆಡುತ್ತಿರುವ ನೀರಸ ಪ್ರದರ್ಶನ ನೀಡುತ್ತಿದೆ.

ಮೊದಲ ಹತ್ತು ಓವರ್‌ಗಳಲ್ಲಿ ಉತ್ತಮ ಬ್ಯಾಟಿಂಗ್‌ ನಡೆಸಿದ ಟೀಂ ಇಂಡಿಯಾ ನಂತರದ ಓವರ್‌ಗಳಲ್ಲಿ ವೇಗದ ರನ್‌ ಗಳಿಸಲು ಪರದಾಡುತ್ತಿದೆ.  47 ರನ್‌ ಗಳಿಸಿದ್ದ ನಾಯಕ ರೋಹಿತ್ ಶರ್ಮಾ ಮ್ಯಾಕ್ಸ್‌ವೆಲ್‌ ಬೌಲಿಂಗ್‌ನಲ್ಲಿ ಟ್ರಾವಿಸ್ ಹೆಡ್ ಹಿಡಿದ ಅದ್ಭುತ ಕ್ಯಾಚ್‌ನಿಂದಾಗಿ ಪೆವಿಲಿಯನ್‌ಗೆ ತೆರಳಿದರು. ಅವರ ಆಟದಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 4 ಬೌಂಡರಿಗಳಿದ್ದವು.

ರೋಹಿತ್‌ಗೂ ಮೊದಲು ಶುಭ್‌ಮನ್‌ಗಿಲ್‌ (4) ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ಜಂಪಾಗೆ ಕ್ಯಾಚ್‌ ನೀಡಿ ಔಟಾಗಿದ್ದರು. ಸತತ ಎರಡು ಶತಕ ಗಳಿಸಿದ್ದ ಶ್ರೇಯಸ್‌ ಅಯ್ಯರ್ (4) ಕೂಡ ಆಸೀಸ್‌ ನಾಯಕ ಕಮ್ಮಿನ್ಸ್ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್‌ ಇಂಗ್ಲಿಸ್‌ಗೆ ಕ್ಯಾಚ್‌ ನೀಡಿ ಔಟಾದರು.

Advertisements

ಈ ಸುದ್ದಿ ಓದಿದ್ದೀರಾ? ವಿಶ್ವಕಪ್ | ದ್ರಾವಿಡ್, ಕೊಹ್ಲಿ,ಶಮಿ ಯಾರಿಗಾಗಿ ಈ ಬಾರಿಯ ಕಪ್; ರೋಚಕ ಹಣಾಹಣಿಯ ನಿರೀಕ್ಷೆಯಲ್ಲಿ ಕ್ರಿಕೆಟ್ ಜಗತ್ತು

ವಿಶ್ವಕಪ್‌ ಟೂರ್ನಿನಲ್ಲಿ 6 ಅರ್ಧ ಶತಕ ಗಳಿಸಿದ ವಿರಾಟ್‌ ಕೊಹ್ಲಿ 54 ರನ್‌ ಗಳಿಸಿ ಕೀಪರ್‌ ಇಂಗ್ಲಿಸ್‌ಗೆ ಕ್ಯಾಚ್‌ ನೀಡಿ ಔಟಾದರು. ವಿರಾಟ್‌ ಅವರು ಕೆ ಎಲ್‌ ರಾಹುಲ್‌ ಅವರೊಂದಿಗೆ ನಾಲ್ಕನೆ ವಿಕೆಟ್‌ಗೆ 109 ಎಸೆತಗಳಲ್ಲಿ 67 ರನ್‌ ಜೊತೆಯಾಟವಾಡಿದರು.

ಸದ್ಯ ರವೀಂದ್ರ ಜಡೇಜ (6) ಜೊತೆ ಕ್ರೀಸ್‌ನಲ್ಲಿರುವ ಕೆ ಎಲ್‌ ರಾಹುಲ್ 80 ಚೆಂಡುಗಳಲ್ಲಿ 47 ರನ್‌ ಗಳಿಸಿ ಆಡುತ್ತಿದ್ದಾರೆ.

ವಿರಾಟ್‌ ಹಾಗೂ ರಾಹುಲ್ ಜೊತೆ ನಾಲ್ಕನೆ ವಿಕೆಟ್‌ಗೆ ಜೊತೆಯಾಟವಾಡುವಾಗ 97 ಚೆಂಡುಗಳಿಂದ ಬೌಂಡರಿಯೆ ಬಂದಿರಲಿಲ್ಲ. 98 ಎಸೆತಕ್ಕೆ ರಾಹುಲ್‌ ಮ್ಯಾಕ್ಸ್‌ವೆಲ್‌ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸಿದರು.

ಇತ್ತೀಚಿನ ವರದಿಗಳಂತೆ ಭಾರತ 33 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್‌ ಗಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X