ಪ್ರಧಾನಿ ಮೋದಿ ’ಭಾರತ್ ಮಾತಾ ಕೀ ಜೈ’ ಅನ್ನದೆ ’ಅದಾನಿ ಕೀ ಜೈ’ ಅನ್ನಲಿ: ರಾಹುಲ್ ಗಾಂಧಿ

Date:

Advertisements

ಪ್ರಧಾನಿ ನರೇಂದ್ರ ಮೋದಿಯವರು ದಣಿವರಿಯದೆ ಉದ್ಯಮಿ ಗೌತಮ್ ಅದಾನಿಯವರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರಾಜಸ್ಥಾನದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿರುವ ಅವರು, “ಪ್ರಧಾನಿ ಮೋದಿಯವರು ಭಾರತ್ ಮಾತಾ ಕಿ ಜೈ (ಭಾರತ ಮಾತೆಗೆ ಜಯವಾಗಲಿ) ಘೋಷಣೆ ಮಾಡುವ ಬದಲು ’ಅದಾನಿ ಜೀ ಕಿ ಜೈ’ ಎಂದು ಘೋಷಿಸಬೇಕು” ಎಂದು ಕುಟುಕಿದ್ದಾರೆ.

ಮೋದಿಯವರು ಅದಾನಿಗಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರು ‘ಜೈ ಭಾರತ್ ಮಾತಾ’ ಎನ್ನುತ್ತಾರೆ. ‘ಅದಾನಿ ಜಿ ಕಿ ಜೈ’ ಎಂದು ಹೇಳಬೇಕು ಎಂದಿದ್ದಾರೆ.

Advertisements

ಬಡವರು, ರೈತರು, ಕಾರ್ಮಿಕರ ಪಾಲ್ಗೊಳ್ಳುವಿಕೆ ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವುದರಲ್ಲಿ ಭಾರತ ಮಾತೆಯ ನಿಜವಾದ ವಿಜಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನ ಮಂತ್ರಿಗಳು ಎರಡು ಪ್ರತ್ಯೇಕ ‘ಹಿಂದೂಸ್ಥಾನಗಳನ್ನು’ ರೂಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿರುವ ಅವರು, ಒಂದು ಹಿಂದೂಸ್ಥಾನ ಅದಾನಿಗಾಗಿ ಇನ್ನೊಂದು ಕಡಿಮೆ ಸವಲತ್ತು ಉಳ್ಳವರಿಗಾಗಿ ಎಂದು ತಿಳಿಸಿದ್ದಾರೆ.

ಭಾರತ ಮಾತೆಯ ಏಳಿಗೆಯು ಸಮಾಜದ ಎಲ್ಲಾ ವರ್ಗಗಳ ಒಳಗೊಳ್ಳುವಿಕೆಯ ಮೇಲೆ ಅವಲಂಬಿತವಾಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ಜಾತಿ ಗಣತಿಯನ್ನು ನಡೆಸುವುದನ್ನು ಮೋದಿಯವರು ವಿರೋಧಿಸುತ್ತಿದ್ದಾರೆ ಎಂದಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಅಂತಹ ಕ್ರಮಗಳನ್ನು ಕೈಗೊಳ್ಳುವ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X