ಅಮುಲ್ ವಿವಾದ | ಸಿ ಟಿ ರವಿಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ : ಕಾಂಗ್ರೆಸ್ ಪ್ರಶ್ನೆ

Date:

Advertisements
  • ಮಹಾರಾಷ್ಟ್ರದ ಕುರಿತು ಮಾತನಾಡುವಂತೆ ಕಾಂಗ್ರೆಸ್ ಆಗ್ರಹ
  • ಅಮುಲ್‌ನ ವ್ಯಾಪಾರ ವಿಸ್ತರಣೆ ಸಮರ್ಥಿಸಿಕೊಂಡಿದ್ದ ರವಿ

ಸಿ ಟಿ ರವಿ ಅವರೇ ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗುಜರಾತ್ ಮೂಲದ ಅಮುಲ್ ಕಂಪನಿ ರಾಜ್ಯದಲ್ಲಿ ತನ್ನ ವ್ಯಾಪಾರ ವಿಸ್ತರಿಸುತ್ತಿದೆ. ಈ ಕುರಿತು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕ ಸಿ ಟಿ ರವಿ ಸಮರ್ಥನೆ ಮಾಡಿಕೊಂಡಿದ್ದರು. ಅಮುಲ್ ವಿರೋಧಿಸುವವರನ್ನು ‘ಗುಲಾಮರು’ ಎಂದು ಸಹ ಕರೆದಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡುತ್ತೇವೆ ಎಂದರೂ ಸಮರ್ಥನೆ. ಮೊಸರಿಗೆ ದಹಿ ಎಂದರೂ ಸಮರ್ಥನೆ, ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ,
ಹಿಂದಿ ಹೇರಿಕೆಗೂ ಸಮರ್ಥನೆ” ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಅಮುಲ್‌ ಮಾರಾಟಕ್ಕೆ ಮುಂದಾದರೆ ಕನ್ನಡಿಗರು ದಂಗೆ ಏಳುತ್ತಾರೆ: ನಾರಾಯಣಗೌಡ ಎಚ್ಚರಿಕೆ

“ಸಿ ಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ” ಎಂದು ವ್ಯಂಗ್ಯವಾಡಿದ್ದಾರೆ.

“ಕನ್ನಡಿಗರು ತಮ್ಮ ಹಕ್ಕುಗಳಿಗಾಗಿ, ತಮ್ಮ ಭಾಷೆಯ ಉಳಿವಿಗಾಗಿ, ತಾವು ಕಟ್ಟಿ ಬೆಳೆಸಿದ ಸಂಸ್ಥೆಗಳಿಗಾಗಿ ಹೋರಾಡಿದಾಗೆಲ್ಲ ಅಣಕಿಸುವ, ಟೀಕಿಸುವ ಸಿ.ಟಿ ರವಿಯವರೇ, ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ಯಾಕಿಷ್ಟು ದ್ವೇಷ, ತಾತ್ಸಾರ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮುಂದುವರೆದ ಕಾಂಗ್ರೆಸ್, “ಸಿ ಟಿ ರವಿ ಅಂದರೆ, ಕನ್ನಡಿಗರ ಟೀಕೆ ರವಿ! ಕನ್ನಡಕ್ಕೆ ಕಂಟಕ ರವಿ!” ಎಂದಿದೆ.

ಸಿ ಟಿ ರವಿ ಟ್ವೀಟ್

“ಇಟಲಿಯನ್ನರು ದೇಶವನ್ನು ಆಳಿದರೆ ಗುಲಾಮರಿಗೆ ಯಾವ ತೊಂದರೆಯೂ ಇಲ್ಲ. ಆದರೆ, ಭಾರತದ್ದೆ ಆದ ಅಮುಲ್ ಇತರೆ ಕಂಪನಿಗಳಂತೆ ಕರ್ನಾಟಕದಲ್ಲಿ ಮಾರಾಟ ಮಾಡಿದರೆ ಇವರಿಗೆ ಸಮಸ್ಯೆ ಎನಿಸುತ್ತದೆ. ಇದೆಂತ ಮುಟ್ಟಾಳರ ಗುಂಪೋ” ಎಂದು ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X