ಮೈಸೂರು | ಸಂಚಾರ ನಿಯಮ ಉಲ್ಲಂಘನೆ; ಕ್ರಮಕ್ಕೆ ಮುಂದಾದ ಪೊಲೀಸರು

Date:

Advertisements

ಸಾರ್ವಜನಿಕ ರಸ್ತೆಯಲ್ಲಿ ಸ್ಟಂಟ್‌ ಮಾಡುವ ಮೂಲಕ ಅಪಾಯಕಾರಿ ಚಾಲನೆ ಮಾಡುತ್ತಿದ್ದ ಆಟೋ ಚಾಲಕನ ವಿರುದ್ಧ ಪ್ರಲರಣ ದಾಖಲಿಸಿದ್ದ ಮೈಸೂರು ನಗರದ ವಿವಿ ಪುರಂ ಪೊಲೀಸರು ಆಟೋ ಚಾಲಕನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ನಗರ ಪೊಲೀಸರು ಬಲವಾದ ಸಂದೇಶ ಕಳುಹಿಸಿದ್ದು, “ಸಂಚಾರ ನಿಯಮಗಳನ್ನು ನಿರ್ಲಕ್ಷಿಸುವ ಮತ್ತು ರಸ್ತೆ ಸಂಚರಿಸುವ ಇತರ ವಾಹನ ಸವಾರರಿಗೆ ಕುತ್ತು ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

“ಈ ಹಿಂದೆ, ಸ್ಕೂಟರ್‌ಗಳಲ್ಲಿ ಸ್ಟಂಟ್ ಮಾಡಿ ನಂತರ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ ದ್ವಿಚಕ್ರ ವಾಹನ ಸವಾರರು, ವಿಶೇಷವಾಗಿ ಹದಿಹರೆಯದವರು ಮತ್ತು ಯುವಕರ ಮೇಲೆ ಕ್ರಮ ಕೈಗೊಳ್ಳಲಾಗಿತ್ತು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪುತ್ರನ ವಿರುದ್ಧವೂ ಈ ಅಪರಾಧಕ್ಕಾಗಿ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

Advertisements

“ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರನ್ನು ಸಂಚಾರ ಪೊಲೀಸರು ಬಿಡುವುದಿಲ್ಲ. ಆದರೂ ಇತ್ತೀಚೆಗೆ, ದ್ವಿಚಕ್ರ ವಾಹನ ಸವಾರರು ಸಂಖ್ಯೆಯನ್ನು ಮರೆಮಾಚಲು ಮಡಚಬಹುದಾದ ರೀತಿಯಲ್ಲಿ ನೋಂದಣಿ ಸಂಖ್ಯೆ ಫಲಕಗಳನ್ನು ಬದಲಾಯಿಸುತ್ತಿರುವುದನ್ನು ನಾವು ಗಮನಿಸಿದ್ದೇವೆ. ಕಣ್ಗಾವಲು ಕ್ಯಾಮೆರಾಗಳ ಮೂಲಕ ಪೊಲೀಸರು ವಾಹನ ಸಂಖ್ಯೆಯನ್ನು ವೀಕ್ಷಿಸುವುದನ್ನು ಮತ್ತು ಪ್ರಕರಣ ದಾಖಲಿಸುವುದರಿಂದ ತಪ್ಪಿಸಿಕೊಳ್ಳಲು ನೋಂದಣಿ ಫಲಕ ಮುಚ್ಚಲು ಕೆಲವು ವಸ್ತುಗಳನ್ನು ಬಳಸುತ್ತಿದ್ದಾರೆ” ಎಂದು ಉಪ ಪೊಲೀಸ್ ಆಯುಕ್ತ (ಸಂಚಾರ ಮತ್ತು ಅಪರಾಧ) ಎಸ್ ಜಾಹ್ನವಿ ತಿಳಿಸಿದ್ದಾರೆ.

“ಆಟೋ ಚಾಲಕರು ಸಮವಸ್ತ್ರ ಧರಿಸದೆ ತಮ್ಮ ವಾಹನಗಳನ್ನು ಓಡಿಸುತ್ತಿದ್ದಾರೆ. ಕೆಲವರು ತಮ್ಮ ವೈಯಕ್ತಿಕ ವಿವರಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ನಗರ ಪೊಲೀಸರು ನೀಡುವ ವಿಶಿಷ್ಟ ಗುರುತಿನ ಸಂಖ್ಯೆಗಳನ್ನು ತೆಗೆದುಹಾಕಿದ್ದಾರೆ. ಅಂತಹ ವಾಹನ ಸವಾರರನ್ನು ನಿಗ್ರಹಿಸಲು ಮತ್ತು ಅವರನ್ನು ಸಾಲಿನಲ್ಲಿ ತರಲು ನಗರ ಪೊಲೀಸರು ವಿಶೇಷ ಅಭಿಯಾನ ಪ್ರಾರಂಭಿಸುತ್ತಾರೆ” ಎಂದು ತಿಳಿಸಿದರು.

“ವಾಹನ ಸವಾರರನ್ನು ಶಿಸ್ತುಬದ್ಧಗೊಳಿಸಲು ನಾವು ವಿವಿಧ ಹಂತಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸುತ್ತೇವೆ. ತ್ರಿವಳಿ ಸವಾರಿ, ಹೆಲ್ಮೆಟ್ ಇಲ್ಲದೆ ಸವಾರಿ, ಏಕಮುಖ ಸಂಚಾರ ನಿಯಮ ಉಲ್ಲಂಘನೆ ಮತ್ತು ವಾಹನಗಳನ್ನು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆಯಂತಹ ಉಲ್ಲಂಘನೆಗಳನ್ನು ಪರಿಶೀಲಿಸಲಾಗುವುದು” ಎಂದು ಡಿಸಿಪಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕಾಂಗ್ರೆಸ್‌ ನಾಯಕಿ ವೀಣಾ ಕಾಶಪ್ಪನವರ ಕಾರು ಅಪಘಾತ

“ಅಪರಾಧಗಳನ್ನು ತಡೆಗಟ್ಟಲು ವಾಹನ ಸವಾರರು ಮತ್ತು ನಿವಾಸಿಗಳಿಗೆ ಅರಿವು ಮೂಡಿಸಲು ನಗರ ಪೊಲೀಸರು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಈ ನಡುವೆ ದ್ವಿಚಕ್ರ ಮತ್ತು ನಾಲ್ಕು ಚಕ್ರದ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುವುದನ್ನು ತಡೆಯಲು ನಿಯಮಿತವಾಗಿ ವಾಹನ ತಪಾಸಣೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X