ನ.22ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ‘ಬೆಂಗಳೂರು ಚಲೋ’

Date:

Advertisements

ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.22 ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿ ‘ಬೆಂಗಳೂರು ಚಲೋ’ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಈ ಧರಣಿ ನಡೆಯಲಿದೆ.

ಬೆಂಗಳೂರಿನಲ್ಲಿ ಒಟ್ಟು 2,877 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1,198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಹುದ್ದೆಗಳ ನೇಮಕಾತಿ ನಡೆದಿಲ್ಲ. ಈಗ ನೇಮಕಾತಿಗೆ ಪ್ರಕಟಣೆ ಹೊರಡಿಸಿದರೂ, ನೇಮಕಾತಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದು ಅಂಗನವಾಡಿ ಕಾರ್ಯಕರ್ತೆಯರ ಕೆಂಗಣ್ಣಿಗೆ ಗುರಿಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾದ ‘ಬೆಂಗಳೂರು ವಿಶ್ವವಿದ್ಯಾಲಯ’ಕ್ಕೇ ಇಲ್ಲ ಬೆಳಕು

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳೇನು?

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಕೂಡಲೇ ಆಗಬೇಕು. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು. ಅಂಗನವಾಡಿ ಸಹಾಯಕಿಯರನ್ನು ಆಫ್‌ಲೈನ್ ಮುಖಾಂತರ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಂದೆ ಇಟ್ಟಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X