ಬೆಂಗಳೂರು | ಸತ್ತು ಹೋಗಿದ್ದೇನೆ ಎಂದು ನಂಬಿಸಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

Date:

Advertisements

ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನು ನಂಬಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಸದ್ಯ ಸಿಸಿಬಿ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.

ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ರೌಡಿ. ಈತ ವೈಟ್‌ಫೀಲ್ಡ್‌ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್.

ಈ ರೌಡಿಶೀಟರ್ ಮಲ್ಲಿ ಕಾಡುಬೀಸನಹಳ್ಳಿ ಸೋಮನ ಡ್ರೈವರ್ ಕೊಲೆ ಪ್ರಕರಣದ ಆರೋಪಿಯಾಗಿದ್ದನು. ಜತೆಗೆ, ರಾಜಾನುಕುಂಟೆಯಲ್ಲಿ ನಡೆದ ಇನ್ನೊಂದು ಕೊಲೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದನು.

Advertisements

ಕೊಲೆ ಮಾಡಿದ ನಂತರ ಕಳೆದ ಎರಡು ವರ್ಷಗಳಿಂದ ಈತ ತಾನು ಸತ್ತಿರುವುದಾಗಿ ಎಲ್ಲರನ್ನು ನಂಬಿಸಿ ಪೊಲೀಸರಿಂದ ತಲೆಮರೆಸಿಕೊಂಡಿದ್ದನು.

ಈತನ ಬಗ್ಗೆ ಆತನ ಮನೆಯವರ ಬಳಿ ಪೊಲೀಸರು ವಿಚಾರಿಸಿದಾಗ ಆತ ಸತ್ತಿದ್ದಾನೆ ಎಂದು ದಾಖಲೆಗಳನ್ನು ತೋರಿಸುತ್ತಿದ್ದರು. ಇನ್ನು ಆತನ ಗೆಳೆಯರು ಮತ್ತು ಪರಿಚಯಸ್ಥರನ್ನು ವಿಚಾರಿಸಿದಾಗಲೂ ಕೂಡಾ ಅವರು ಸತ್ತಿದ್ದಾನೆ ಎಂದು ಹೇಳುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕ್ರಿಕೆಟ್​ ಬೆಟ್ಟಿಂಗ್ ದಂಧೆ ನಡೆಸುತ್ತಿರುವವರ ಬಳಿ ದೊರೆತ ಕೆಜಿ ಚಿನ್ನ

ಅನುಮಾನಗೊಂಡ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಮಲ್ಲಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದರು. ಬಳಿಕ, ಊರೂರು ಸುತ್ತಾಡಿಕೊಂಡು ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪತ್ತೆ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X