ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಿದ್ದರಾಮಯ್ಯ

Date:

Advertisements

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.

“ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ” ಎಂದು ತಿಳಿಸಿದರು.

Advertisements

“ನವದೆಹಲಿಯಿಂದ ಪಕ್ಷದ ವರಿಷ್ಠರಾದ ರಣದೀಪ್ ಸುರ್ಜೆವಾಲ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರ ನೇತೃತ್ವದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X