ಆಸ್ಟ್ರೇಲಿಯಾ ವಿಶ್ವಕಪ್ ಗೆಲುವಿನ ಹಿಂದಿದೆ ಮಂಗಳೂರು ಯುವತಿಯ ಪಾತ್ರ

Date:

Advertisements

ಆರನೇ ಬಾರಿ ಏಕದಿನ ವಿಶ್ವಕಪ್‌ ಕ್ರಿಕೆಟ್ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯಾ ತಂಡದ ಗೆಲುವಿನ ಹಿಂದೆ ಮಂಗಳೂರು ಮೂಲದ ಉರ್ಮಿಳಾ ರೊಸಾರಿಯೋ ಎಂಬುವವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೇರ್‌ ಟೇಕರ್‌ ಆಗಿರುವ ಮಂಗಳೂರು ಮೂಲದ ಯುವತಿ ಉರ್ಮಿಳಾ ರೊಸಾರಿಯೋ ಆಸೀಸ್ 2023ರ ವಿಶ್ವಕಪ್‌ ಎತ್ತಿ ಹಿಡಿಯುವಲ್ಲಿ ತಮ್ಮ ಕೊಡುಗೆಯನ್ನು ಸಹ ನೀಡಿದ್ದಾರೆ. 34 ವರ್ಷದ ಉರ್ಮಿಳಾ ರೊಸಾರಿಯೋ ಅವರು ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಮ್ಯಾನೇಜರ್ ಆಗಿ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರು ಮೂಲತಃ ಮಂಗಳೂರಿನ ಕಟೀಲಿನ ಕಿನ್ನಿಗೋಳಿಯವರಾಗಿರುವ ಐವಿ ಮತ್ತು ವಾಲೆಂಟೈನ್ ರೊಸಾರಿಯೋ ದಂಪತಿಯ ಪುತ್ರಿ.

Advertisements

ಉರ್ಮಿಳಾ ರೊಸಾರಿಯೋ ಪೋಷಕರು ಕಿನ್ನಿಗೋಳಿಯಿಂದ ಉದ್ಯೋಗದ ನಿಮಿತ್ತ ಕತಾರ್‌ನ ದೋಹಾ ವಲಸೆ ಹೋಗಿದ್ದರು. ಉರ್ಮಿಳಾ ಅವರು ಜನನವಾಗಿದ್ದು ಕತಾರ್‌ನಲ್ಲಿಯೇ. ಬಾಲ್ಯದಿಂದಲೇ ಕ್ರೀಡೆ ಬಗ್ಗೆ ಅಪರಿಮಿತ ಆಸಕ್ತಿ ಹೊಂದಿದ್ದ ಉರ್ಮಿಳಾ, ಮೊದಲು ಕತಾರ್ ಟೆನ್ನಿಸ್ ಫೆಡರೇಶನ್‌ನಲ್ಲಿ ಕಾರ್ಯನಿರ್ವಹಿಸಿದ್ದರು.

ಊರ್ಮಿಳಾ ಪೋಷಕರು ಏಳು ವರ್ಷಗಳ ಹಿಂದೆ ಭಾರತಕ್ಕೆ ಮರಳಿ ಸದ್ಯ ಹಾಸನದ ಸಕಲೇಶಪುರದಲ್ಲಿ ಕಾಫಿ ಎಸ್ಟೇಟ್ ಖರೀದಿಸಿ ಅಲ್ಲಿಯೇ ನೆಲೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಚಿನ್‌ ರವೀಂದ್ರ ರೀತಿ ಶ್ರೇಯಸ್‌ ಅಯ್ಯರ್‌ಗೂ ಕೂಡ ಇದೆ ಕರ್ನಾಟಕದ ನಂಟು

ಈ ನಡುವೆ, ಊರ್ಮಿಳಾ ಕಾರ್ನೆಗೀ ಮೆಲನ್ ವಿಶ್ವವಿದ್ಯಾನಿಲಯದಿಂದ ಬಿಬಿಎ ಪದವಿ ಪಡೆಯಲು ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿಯಿದ್ದ ಕಾರಣ ವಿದ್ಯಾಭ್ಯಾಸದ ನಂತರ ಮೊದಲು ಆಸ್ಟ್ರೇಲಿಯಾದ ಅಡಿಲೇಡ್ ಕ್ರಿಕೆಟ್ ತಂಡದೊಂದಿಗೆ ಸುಮಾರು ಮೂರು ವರ್ಷಗಳ ಕಾಲ ಕೆಲಸ ಮಾಡಿದರು. ಅನಂತರ, ತಮ್ಮ ಕೆಲಸದ ಬದ್ಧತೆಯಿಂದಾಗಿ ಮ್ಯಾನೇಜರ್ ಆಗಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡಕ್ಕೆ ನಿಯೋಜನೆಗೊಂಡರು. ಹಾಗೆಯೆ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಟೀಮ್ ಮ್ಯಾನೇಜರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಉರ್ಮಿಳಾ ರೊಸಾರಿಯೋ

ಕತಾರ್‌ನಲ್ಲಿ ಫುಟ್‌ಬಾಲ್ ಕ್ರೀಡಾಂಗಣವನ್ನು ನಿರ್ವಹಿಸುವ ಪ್ರಯುಕ್ತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಿಂದ ಕೆಲಕಾಲ ಬಿಡುವು ಪಡೆದುಕೊಂಡರು. ಕತಾರ್‌ನಲ್ಲಿಯೇ ನಾಲ್ಕು ತಿಂಗಳ ಕಾಲ ಇದ್ದು ಫುಟ್‌ಬಾಲ್ ಕ್ರೀಡಾಂಗಣ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದರು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕತಾರ್‌ನಿಂದ ಆಸ್ಟ್ರೇಲಿಯಾಕ್ಕೆ ಹಿಂದಿರುಗಿದ ನಂತರ, ಊರ್ಮಿಳಾ ಅವರ ಕೆಲಸದ ಬದ್ಧತೆಯನ್ನು ಗಮನಿಸಿದ ಆಸೀಸ್ ಕ್ರಿಕೆಟ್ ಮಂಡಳಿ, ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಪುರುಷರ ಕ್ರಿಕೆಟ್ ತಂಡವನ್ನು ನೋಡಿಕೊಳ್ಳಲು ಸಲುವಾಗಿ ಊರ್ಮಿಳಾ ಅವರನ್ನು ಕೇರ್‌ ಟೇಕರ್‌ ಆಗಿ ನೇಮಿಸಿತು. ಒಂದೂವರೆ ತಿಂಗಳ ಕಾಲ ಭಾರತದ ವಿವಿಧ ನಗರಗಳಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.

“ಆಸೀಸ್‌ ತಂಡದ ಕೇರ್‌ ಟೇಕರ್ ಆಗಿದ್ದ ಸಂದರ್ಭದಲ್ಲಿ ಉರ್ಮಿಳಾ ಆಟಗಾರರು ಹೋಗುವ ದೇಶದಲ್ಲಿ ಆಟಗಾರರ ಊಟೋಪಚಾರ, ವಸತಿ ಎಲ್ಲವನ್ನೂ ನಿಭಾಯಿಸಿದ್ದಾರೆ. ಆಕೆಗೆ ಕನ್ನಡ, ಇಂಗ್ಲಿಷ್, ಹಿಂದಿ, ಕೊಂಕಣಿ ಭಾಷೆಗಳ ಹಿಡಿತವಿದೆ. ಅವಳ ಕೆಳಗೆ ದೊಡ್ಡ ತಂಡವೇ ಕಾರ್ಯ ನಿರ್ವಹಿಸುತ್ತಿದೆ. ಮಗಳ ಸಾಧನೆ ಬಗ್ಗೆ ಹೆಮ್ಮೆ ಇದೆ. ಕೆಲಸದಲ್ಲಿ ಸಮಯ ಸಿಕ್ಕಾಗ ಸಕಲೇಶಪುರದ ಎಸ್ಟೇಟಿಗೆ ಆಗಮಿಸುತ್ತಾಳೆ” ಎಂದು ಉರ್ಮಿಳಾ ತಂದೆ ವಾಲೆಂಟೈನ್ ರೊಸಾರಿಯೋ ಹೇಳುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ...

ಬೆಳ್ತಂಗಡಿ: ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು: ಸಮಾನ ಮನಸ್ಕ ಸಂಘಟನೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ...

ಮಂಗಳೂರು | ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್...

Download Eedina App Android / iOS

X