ಅತ್ಯಾಚಾರ ಪ್ರಕರಣ | ಆರೋಪಿಯೊಂದಿಗೆ ವಿವಾಹವಾಗಲು ಒಪ್ಪಿದ ಸಂತ್ರಸ್ತೆ; ಆರೋಪಿಗೆ ಒಂದು ತಿಂಗಳ ಗಡುವು ನೀಡಿದ ಹೈಕೋರ್ಟ್‌

Date:

Advertisements

ಅತ್ಯಾಚಾರಕ್ಕೆ ಕೊಳಗಾಗಿದ್ದ ಸಂತ್ರಸ್ತೆ (ಈಗ ವಯಸ್ಕಳು) ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ ನಂತರ ಆರೋಪಿ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಸಂತ್ರಸ್ತೆಯನ್ನು ವಿವಾಹವಾಗಲು ಆರೋಪಿಗೆ ಒಂದು ತಿಂಗಳ ಗಡುವು ನೀಡಿದೆ.

ಕಾಮುಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಆರೋಪಿಯನ್ನು ಬಂಧಿಸಲಾಗಿತ್ತು. ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆ 18ನೇ ವಯಸ್ಸಿಗೆ ಕಾಲಿಟ್ಟಿದ್ದು, ಆಕೆ ಆರೋಪಿಯನ್ನು ವಿವಾಹವಾಗುವ ಇಂಗಿತ ವ್ಯಕ್ತಪಡಿಸಿದ್ದಾಳೆ.

ಮಂಗಳವಾರ, ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದ ಸಂತ್ರಸ್ತೆ ಮತ್ತು ಆಕೆಯ ತಂದೆ, ‘ವಿಚಾರಣೆಯನ್ನು ರದ್ದುಪಡಿಸಲು ತಮ್ಮ ಅಭ್ಯಂತರವಿಲ್ಲ’ ಎಂದು ತಿಳಿಸಿದ್ದಾರೆ.

Advertisements

ಸಂತ್ರಸ್ತೆ ತನ್ನ ಅಫಿಡವಿಟ್‌ನಲ್ಲಿ “ನಾನು ಆರೋಪಿಯನ್ನು ವಿವಾಹವಾಗಲು ಉದ್ದೇಶಿಸಿದ್ದೇನೆ. ಆತನೊಂದಿಗೆ ಸಂತೋಷದ ವೈವಾಹಿಕ ಜೀವನ ನಡೆಸಲು ಬಯಸಿದ್ದೇನೆ. ಆರೋಪಿಯೂ ಅದಕ್ಕೆ ಒಪ್ಪಿದ್ದಾನೆ. ಹೀಗಾಗಿ, ನ್ಯಾಯಾಲಯವು ಆತನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ನನ್ನ ಯಾವುದೇ ಅಭ್ಯಂತರವಿಲ್ಲ” ಎಂದು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದ ಆರೋಪಿಯೂ ಸಂತ್ರಸ್ತೆಯನ್ನು ವಿವಾಹವಾಗಲು ಸಿದ್ದನಿದ್ದೇನೆ ಎಂದು ಹೇಳಿದ್ದಾನೆ.

ಸಂತ್ರಸ್ತೆ ಮತ್ತು ಆರೋಪಿಯ ವಾದ ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡ ಅವರಿದ್ದ ಪೀಠವು, ಆರೋಪಿಯ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಮಾಡಿದೆ. ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಸೂಚನೆ ನೀಡಿದೆ.

“ನ್ಯಾಯಾಲಯದ ಮುಂದೆ ಹಾಜರಾದ ಸಂತ್ರಸ್ತೆಯು ಆರೋಪಿಯೊಂದಿಗೆ ಮದುವೆಯಾಗಲು ಉದ್ದೇಶಿಸಿರುವುದಾಗಿ ಹೇಳಿದ್ದಾರೆ. ಆರೋಪಿ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರೆಸಿದರೆ ಆರೋಪಿಯ ಸೆರೆವಾಸಕ್ಕೆ ಕಾರಣವಾಗುತ್ತದೆ. ಹೀಗಾಗಿ, ಆರೋಪಿ ವಿರುದ್ಧದ ವಿಚಾರಣೆಯನ್ನು ಒಂದು ತಿಂಗಳೊಳಗೆ ಸಂತ್ರಸ್ತೆಯನ್ನು ಮದುವೆಯಾಗುವ ಷರತ್ತಿನ ಮೇಲೆ ಮುಂದೂಡಲಾಗಿದೆ” ಎಂದು ಹೈಕೋರ್ಟ್‌ ಹೇಳಿದೆ.

“ಆರೋಪಿಯು ಆದೇಶ ಬಂದ ಒಂದು ತಿಂಗಳೊಳಗೆ ಸಂತ್ರಸ್ತೆಯೊಂದಿಗೆ ವಿವಾಹವಾಗಬೇಕು. ವಿವಾಹವನ್ನು ಸಕ್ಷಮ ಪ್ರಾಧಿಕಾರದ ಮುಂದೆ ನೋಂದಾಯಿಸಿಕೊಳ್ಳಬೇಕು” ಎಂದು ಷರತ್ತು ವಿಧಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X