ಯಾದಗಿರಿ | ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಎಐಡಿಎಸ್‌ಒ ಒತ್ತಾಯ

Date:

Advertisements

ಎಲ್ಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಖಾತ್ರಿ ಪಡಿಸಲು ಒತ್ತಾಯಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ತಹಸೀಲ್ದಾರ್ ಕಚೇರಿಯ ಎದುರುಗಡೆ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತ್ರತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟಿಸಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಗ್ರೇಡ್ 2 ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ಎಐಡಿಎಸ್‌ಒ ಯಾದಗಿರಿ ಜಿಲ್ಲಾ ಸಂಚಾಲಕ ಶಿಲ್ಪಾ.ಬಿ. ಕೆ ಮಾತನಾಡಿ, “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸೇರಿದಂತೆ ಹಲವು ವಿಭಾಗಗಳ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ವಿದ್ಯಾರ್ಥಿ ವೇತನವು ಮಂಜೂರಾಗಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಅರ್ಜಿ ಹಾಕಿದ್ದ ವಿದ್ಯಾರ್ಥಿವೇತನವೂ ಇಲ್ಲಿಯವರೆ ವಿದ್ಯಾರ್ಥಿಗಳಿಗೆ ದೊರೆತಿಲ್ಲ. ಇನ್ನು ಕೆಲವು ದಿನಗಳ ಹಿಂದಷ್ಟೇ ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶಿಷ್ಯವೇತನವನ್ನು ಕೂಡಾ ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ ವಾರ್ಷಿಕ 5 ಸಾವಿರದಿಂದ 60 ಸಾವಿರವರೆಗೆ ವಿತರಿಸುತ್ತಿದ್ದ ವಿದ್ಯಾರ್ಥಿ ವೇತನದ ಮೊತ್ತವನ್ನು 1100 ರಿಂದ 11 ಸಾವಿರಕ್ಕೆ ಇಳಿಸಲಾಗಿದೆ. ಇದು ಅತ್ಯಂತ ವಿದ್ಯಾರ್ಥಿ ವಿರೋಧಿ ನಡೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಈಗಾಗಲೇ ಎಲ್ಲಾ ಹಂತದ ಶಿಕ್ಷಣವು ವ್ಯಾಪಾರಿಕರಣಗೊಂಡು ಶುಲ್ಕಗಳು ಗಗನಕ್ಕೇರಿವೆ. ಬಡ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುವುದು ಅತ್ಯಂತ ದುಸ್ತರವಾಗಿರುವ ಇಂದಿನ ಪರಿಸ್ಥಿತಿಯಲ್ಲಿ ಸರ್ಕಾರದ ಶಿಷ್ಯವೇತನವು ಸಾಕಷ್ಟು ಸಹಕಾರಿಯಾಗಿದೆ. ಈ ಶಿಷ್ಯವೇತನದಿಂದಾಗಿ ಬಡ ವಿದ್ಯಾರ್ಥಿಗಳು ಪಿಯ, ಪದವಿ ಸೇರಿದಂತೆ ಇಂಜಿನಿಯರಿಂಗ್ ಮತ್ತು ಮೆಡಿಕಲ್ ನಂತಹ ಉನ್ನತ ವ್ಯಾಸಂಗವನ್ನು ಕೂಡ ಪಡೆಯಬಹುದಾಗಿದೆ. ಆದರೆ ಈಗ ಭಾರೀ ಪ್ರಮಾಣದಲ್ಲಿ ಶಿಷ್ಯವೇತನದ ಮೊತ್ತವನ್ನು ಕಡಿತಗೊಳಿಸಿರುವುದು ಹಾಗೂ ವಿತರಣೆಯಲ್ಲಿ ದೀರ್ಘ ವಿಳಂಬವಾಗಿರುವುದು ಕಾರ್ಮಿಕರ ಹಾಗೂ ಬಡಮಕ್ಕಳ ಶಿಕ್ಷಣದ ಕನಸುಗಳನ್ನು ಚಿವುಟಿ ಹಾಕಿದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಎಐಡಿಎಸ್‌ಒ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವೆಂಕಟೇಶ್ ಮಾತನಾಡಿ, “ಜನಸಾಮಾನ್ಯರಿಂದ ಸಂಗ್ರಹವಾಗಿರುವ ತೆರಿಗೆ ದುಡ್ಡನ್ನು ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರವು ವಿನಿಯೋಗಿಸಬೇಕು. ಸೆಸ್ ಹೆಸರಲ್ಲಿ ಸಂಗ್ರಹವಾಗುತ್ತಿರುವ ಹಣವು ಕಾರ್ಮಿಕ ನಿಧಿಯಲ್ಲಿ ಹೇರಳವಾಗಿ ಶೇಖರಣೆಯಾಗುತ್ತಿದೆ. ಇದು ಕಾರ್ಮಿಕರ ಬೆವರಿನ ಫಲ. ಮತ್ತು ಇದನ್ನು ಸಂಪೂರ್ಣವಾಗಿ ಅವರ ಏಳಿಗೆಗೆ ಬಳಸಬೇಕು” ಎಂದು ಒತ್ತಾಯಿಸಿದರು.

“ಸರ್ಕಾರವು ಈ ಕುರಿತು ಗಮನ ಹರಿಸಿ ಕೂಡಲೇ ವಿದ್ಯಾರ್ಥಿ ವೇತನಗಳನ್ನು ಮಂಜೂರು ಮಾಡಬೇಕು ಮತ್ತು ಕಡಿತಗೊಳಿಸಿರುವ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಮೊತ್ತವನ್ನು ಹೆಚ್ಚಿಸಬೇಕು. ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ರಾಜ್ಯ ಸರ್ಕಾರವು ನೆರವಾಗಬೇಕೆಂದು” ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ನ. 26 ರಿಂದ 28 ವರೆಗೆ ಬೆಂಗಳೂರಿನಲ್ಲಿ ರಾಜ ಭವನ ಚಲೋ ಮಹಾಧರಣಿ

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಶಬಾನಾ, ಶಿಲ್ಪಾ, ಪದ್ಮಾ, ರಾಧಿಕಾ, ವಿದ್ಯಾ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X