ಮೈಸೂರು | ರೌಡಿ ಶೀಟರ್‌ಗೆ ನೀಡಲಾಗಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್

Date:

Advertisements

ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ಗೆ ನೀಡಲಾಗಿರುವ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್‌ ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಹೇಳಿದ್ದಾರೆ.

ಮೈಸೂರಿನ ಲಷ್ಕರ್ ಪೊಲೀಸ್‌ ಠಾಣೆಯಲ್ಲಿ ಕಾಂಗ್ರೆಸ್‌ ಮುಖಂಡ ಡಾ. ಕೆ.ಎಂ ಅಶೋಕ್ ವಿರುದ್ಧ ರೌಡಿ ಶೀಟರ್‌ ಪಟ್ಟಿ ತೆರೆಯಲಾಗಿದೆ. ಆದರೆ, ಆತನಿಗೆ ಕನ್ನಡ ರಾಜ್ಯೋತ್ಸವ ದಿನದಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. ಆತನ ವಿರುದ್ಧ ರೌಡಿ ಶೀಟರ್ ಆರೋಪ ಇರುವ ಬಗ್ಗೆ ವರದಿಯಾದ ಬಳಿಕ, ಪ್ರಶಸ್ತಿಯನ್ನು ವಾಪಸ್ ಪಡೆಯುವುದಾಗಿ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಅಶೋಕ್ ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಮಗ ಇತ್ತೀಚೆಗೆ ಪುಂಡಾಟ ತೋರಿಸಿದ್ದರು. ಆತನ ವರ್ತನೆಯಿಂದಾಗಿ ಅಶೋಕ್ ವಿರುದ್ಧ ರೌಡಿ ಶೀಟರ್ ಎಂದು ಪ್ರಕರಣ ದಾಖಲಾಗಿರುವುದು ತಿಳಿದುಬಂದಿತ್ತು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X