ರಾಯಚೂರು | ಗ್ರಾಮೀಣ ಭಾಗದ ಮಕ್ಕಳಿಗೆ ಬಾಲಮೇಳ ಉತ್ತಮ ವೇದಿಕೆ: ಶಶಿಕಾಂತ ಶಿವಪುರೆ

Date:

Advertisements

ವಿದ್ಯಾರ್ಥಿಗಳು ತಮ್ಮೊಳಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಬಾಲಮೇಳ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ. ಮಕ್ಕಳಿಗೆ ಕಲಿಯುವ ವಯಸ್ಸಿನಲ್ಲಿ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟು, ಪ್ರೋತ್ಸಾಹಿಸುವ ಸೇವೆ ಶ್ಲಾಘನಿಯ ಎಂದು ರಾಯಚೂರು ಜಿಲ್ಲಾ ಪಂಚಾಯತ್‌ ಡಿಎಸ್‌ಒ ಶಶಿಕಾಂತ್‌ ಶಿವಪುರೆ ಅಭಿಪ್ರಾಯಪಟ್ಟರು.

ರಾಯಚೂರು ಜಿಲ್ಲೆ ಮಾನ್ವಿ ನಗರದ ಲಯೋಲ ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಬಾಲಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಬಣ್ಣ ಬಣ್ಣದ ಉಡುಗೆ ತೊಟ್ಟು, ಮಕ್ಕಳ ಮುಗ್ಧ ಮುಖದಲ್ಲಿ ಸಂತಸ ಸಂಭ್ರಮ ಮನೆ ಮಾಡಿತ್ತು. 22 ಹಳ್ಳಿಗಳ ಕಲಿಕಾ ಕೇಂದ್ರದ ಮಕ್ಕಳು ಬಾಲಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು  20 ತರಹದ ವಿವಿಧ ಆಟಗಳು ಮತ್ತು ಮಕ್ಕಳಿಗಾಗಿ ಪ್ರಂಬಂಧ, ಆಶುಭಾಷಣ, ಚೆಸ್, ಚಿತ್ರಕಲೆ ಮತ್ತು ಇಂಗ್ಲೀಷ್ ಟಂಗ್ ಟ್ವಿಸ್ಟರ್ ಸ್ಪರ್ಧೆಗಳನ್ನೂ ಕೂಡಾ ಆಯೋಜಿಸಲಾಗಿತ್ತು. ಆಟೋಟಗಳಲ್ಲಿ ಭಾಗವಹಿ ಸೋಲು ಗೆಲುವು ಆತಂಕವಿಲ್ಲದೇ ಸ್ಪರ್ಧೆಗಳಲ್ಲಿ ತೊಡಗಿದ್ದರು.

Advertisements

ಕಳೆದ ಹದಿನೈದು ವರ್ಷಗಳಿಂದ ಲೊಯೋಲ ಸಂಸ್ಥೆಯು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ನಡೆಸುವಂತಹ ಕಲಿಕಾ ಕೇಂದ್ರಗಳ ಮಕ್ಕಳ ಪ್ರತಿಭೆಯನ್ನು ಹೊರ ತರಲು ಬಾಲಮೇಳ ಮುಗ್ದ ಮನಸುಗಳ ಕಲರವ ವೇದಿಕೆಯನ್ನು ರೂಪಿಸಿ ಕಾರ್ಯಕ್ರಮ ಆಯೋಜಿಸುತ್ತಿದೆ. ಎಲ್ಲ ಮಕ್ಕಳೂ ಮುಗ್ದ ಮನಸ್ಸಿನಿಂದ ಎಲ್ಲರೊಂದಿಗೂ ಬೆರೆತು ಯಾರಿಗಿಂತ ಯಾರೂ ಕಡಿಮೆ ಇಲ್ಲವೆಂಬಂತೆ ನಾನಾ ಆಟೋಟಗಳಲ್ಲಿಯೂ ಮುಕ್ತವಾಗಿ ಪಾಲ್ಗೊಂಡು ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಸಂಭ್ರಮಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಾಜಿ ಶಾಸಕರ ಆರೋಪಕ್ಕೆ ಕಾಂಗ್ರೆಸ್‌ ಮುಖಂಡ ಧರ್ಮಜ ಉತ್ತಪ್ಪ ತಿರುಗೇಟು

ಈ ಸಂದರ್ಭದಲ್ಲಿ ಬೆಂಗಳೂರಿನ ಸಂತ ಜೊಸೇಫರ ಕಾನೂನು ಕಾಲೇಜ್ ವಿದ್ಯಾರ್ಥಿಗಳು ಮತ್ತು ಲೊಯೋಲ ಸಂಸ್ಥೆಯ ಶಿಕ್ಷಕರು ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.

ವರದಿ : ಮರಿಯಪ್ಪ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X