ದಾವಣಗೆರೆ | ಗ್ರಾಮಕ್ಕೆ ಬಾರದ ಸಚಿವ; ಕಾದು ಸುಸ್ತಾದ ಮನರೇಗಾ ಕಾರ್ಮಿಕರು

Date:

Advertisements

ಗ್ರಾಮಕ್ಕೆ ಭೇಟಿ ನೀಡಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಡೆಸುತ್ತೇನೆಂದು ಹೇಳಿದ್ದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೂ, ಸಚಿವರು ಗ್ರಾಮದತ್ತ ಸುಳಿಯಲಿಲ್ಲ. ಹೀಗಾಗಿ, ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಗೆ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ತೆರಳಿದ್ದರು,. ಅದಕ್ಕೂ ಮುನ್ನ ಜಗಳೂರು ತಾಲೂಕಿನ ಸಿದ್ದಮ್ಮನಹಳ್ಳಿಯಲ್ಲಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಿಗದಿಯಾಗಿತ್ತು. ಅದಕ್ಕಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೆ, ಸಚಿವರು ಗ್ರಾಮದತ್ತ ಸುಳಿಯಲೇ ಇಲ್ಲ.

ಸಚಿವರು ಬಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾರ್ಮಿಕ ಮಂಜಣ್ಣ, “ನಾವು ಮನರೇಗಾ ಕೂಲಿಯನ್ನು ಆಶ್ರಯಿಸಿ ಬದುತ್ತಿದ್ದೇವೆ. ಆದರೆ, ನಮಗೆ ಸರಿಯಾಗಿ ಕೂಲಿ ಕೊಡುತ್ತಿಲ್ಲ. ನಾವು ಹೇಗೆ ಜೀವನ ಮಾಡಬೇಕು? ಇವತ್ತು ಸಚಿವರು ಬರುತ್ತಾರೆ. ಅವರಿಗೆ ನಮ್ಮ ಸಮಸ್ಯೆಗಳನ್ನು ತಿಳಿಸಬೇಕೆಂದು ಕಾದಿದ್ದೇವೆ. ಆದರೆ, ಸಚಿವರು ಬರಲೇ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ಸಚಿವರು ಬರುತ್ತಾರೆಂದು ಬೆಳಗ್ಗೆಯಿಂದಲೂ ಕಾಯಿಸಿದ್ದಾರೆ. ಊಟ, ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ. ಸರ್ಕಾರ ಬಡವರಿಗಾಗಿ ಏನನ್ನೂ ಮಾಡಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X