ಚಿಕ್ಕಬಳ್ಳಾಪುರ | 26 ಮಂದಿಯುಳ್ಳ ಕೂಡು ಕುಟುಂಬದ ರೈತನಿಗೆ ‘ಕೃಷಿ ಸಾಧಕ’ ಪ್ರಶಸ್ತಿ

Date:

Advertisements

ಇತ್ತೀಚೆಗೆ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕೃಷಿ ಮೇಳದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಹಳ್ಳಿ ಗ್ರಾಮದ ರೈತ ಡಿ.ಕೆ ಚಂದ್ರಪ್ಪ ಅವರಿಗೆ ‘ಕೃಷಿ ಸಾಧಕ’ ಪ್ರಶಸ್ತಿ ನೀಡಲಾಗಿದೆ. ಬರೋಬ್ಬರಿ 26 ಮಂದಿ ಇರುವ ಕೂಡು ಕುಟುಂಬವು ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಕುಟುಂಬವನ್ನು ಮುನ್ನಡೆಸುತ್ತಿರುವ ಚಂದ್ರಪ್ಪ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹೊಸಹಳ್ಳಿ ಗ್ರಾಮದ ಚಂದ್ರಪ್ಪ ಅವರ ಕುಟುಂಬಕ್ಕೆ 28 ಎಕರೆ ಕೃಷಿ ಜಮೀನು ಇದೆ. ಇಡೀ ಕುಟುಂಬ ಕೃಷಿಯಲ್ಲಿ ತೊಡಗಿಕೊಂಡಿದ್ದು, ಉತ್ತಮವಾಗಿ ಕೃಷಿ ಮಾಡುತ್ತಿದೆ. ಅದೇ ರೀತಿ ಒಳ್ಳೆಯ ಆದಾಯವನ್ನೂ ಗಳಿಸುತ್ತಿದೆ. ತಮ್ಮ ಜಮೀನಿನಲ್ಲಿ ದ್ರಾಕ್ಷಿ, ದಾಳಿಂಬೆ, ರಾಗಿ, ದಪ್ಪ ಮೆಣಸಿನಕಾಯಿ, ಜೋಳ ಸೇರಿದಂತೆ ನಾನಾ ಬೆಳೆಗಳನ್ನು ಬೆಳೆದಿದ್ದಾರೆ. ಮಾತ್ರವಲ್ಲದೆ, ಹೈನುಗಾರಿಕೆ, ಕೋಳಿ, ಕುರಿ ಸಾಕಾಣಿಕೆಯನ್ನೂ ಚಂದ್ರಪ್ಪ ನಡೆಸುತ್ತಿದ್ದಾರೆ.

“ನಮ್ಮ ಮನೆಯಲ್ಲಿ 26 ಮಂದಿ ಇದ್ದೇವೆ. ಜೊತೆಗೆ, ಕೆಲಸಕ್ಕೂ ಹಲವಾರು ಮಂದಿ ಕೂಲಿ ಕಾರ್ಮಿಕರು ಬರುತ್ತಾರೆ. ವಾತಾವರಣಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯುತ್ತೇವೆ. ನಾನಾ ಸಂದರ್ಭಗಳಲ್ಲಿ ವಿವಿಧ ಬೆಳೆಗಳನ್ನು ಬೆಳೆಯುತ್ತೇವೆ” ಎಂದು ಚಂದ್ರಪ್ಪ ಹೇಳಿರುವುದಾಗಿ ‘ಪಿವಿ’ ವರದಿ ಮಾಡಿದೆ.

Advertisements

“ಜಿಲ್ಲೆಯಲ್ಲಿ ನೀರಿನ ಅಭಾವ ಹೆಚ್ಚಾಗಿದೆ. ನೀರು ಕೃಷಿಗೆ ಸಾವಾಲಾಗಿದೆ. ನಮ್ಮ ಜಮೀನಿನಲ್ಲಿ ಇದೂವರೆಗೂ 66 ಕೊಳವೆ ಬಾವಿಗಳನ್ನು ಕೊರೆಸಿದ್ದೇವೆ. ಹನಿ ನೀರಾವರಿಯನ್ನು ಅಳವಡಿಸಿಕೊಂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X