ಜಾತಿ ಜನಗಣತಿ | ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ : ಸಿಎಂ ಸಿದ್ದರಾಮಯ್ಯ

Date:

Advertisements
  • ಜಾತಿ ಜನಗಣತಿ: ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ
  • ‘ವರದಿ ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು’

ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

Advertisements

ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ಬಗ್ಗೆ ನನಗೆ ತಿಳಿದಿಲ್ಲ. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸಲಾಗುವುದು ಎಂದಿದ್ದಾರೆ.  ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದಾರೆ” ಎಂದರು.

“ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯಗಳ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ. ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ” ಎಂದರು.

ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿ ಸಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X