ಚಿತ್ರದುರ್ಗ | ರೈತ ಹೋರಾಟಗಾರ ನುಲೇನೂರು ಶಂಕರಪ್ಪ ಇನ್ನಿಲ್ಲ

Date:

Advertisements

ರೈತ ಚಳುವಳಿಯಲ್ಲಿ ಸಕ್ರಿಯರಾಗಿದ್ದ ಚಿತ್ರದುರ್ಗದ ಸಾಮಾಜಿಕ ಹೋರಾಟಗಾರ ಟಿ. ನುಲೇನೂರು ಶಂಕರಪ್ಪ ಅವರು ನಿಧನರಾಗಿದ್ದಾರೆ.

68 ವರ್ಷ ವಯಸ್ಸಿನ ಟಿ ನುಲೇನೂರು ಶಂಕರಪ್ಪ ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಸೋಮವಾರ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಶಂಕರಪ್ಪ ಅವರು ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ಅಧ್ಯಕ್ಷರಾಗಿ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಈ ಮೊದಲು ಅವರು ರೈತ ಸಂಘದ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

Advertisements

ರೈತರ ಪರವಾಗಿ ಜಿಲ್ಲೆಯಲ್ಲಿ ಗಟ್ಟಿ ಧ್ವನಿಯಾಗಿದ್ದ ಶಂಕರಪ್ಪಅವರು ಭದ್ರಾ ಮೇಲ್ದಂಡೆ ಹೋರಾಟದ ಅನುಷ್ಟಾನದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅತೀವೃಷ್ಟಿ, ಅನಾವೃಷ್ಟಿಗಳ ಸಂದರ್ಭದಲ್ಲಿ ರೈತರಿಗೆ ಬರ ಪರಿಹಾರ ಸೇರಿದಂತೆ ಎಲ್ಲ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಇದಲ್ಲದೆ ಕಳೆದ 20 ವರ್ಷಗಳಿಂದ ಚಿತ್ರದುರ್ಗ ನಗರದಲ್ಲಿ ಪತ್ರಿಕಾ ವಿತರಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಶಂಕರಪ್ಪ ಅವರ ಅಗಲಿಕೆಗೆ ರಾಜ್ಯದಾದ್ಯಂತ ಹಲವರು ಕಂಬನಿ ಮಿಡಿದಿದ್ದಾರೆ. ಶಂಕರಪ್ಪ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X