ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ: ಇಡಿ ವಿರುದ್ಧ ಕಪಿಲ್ ಸಿಬಲ್ ಆಕ್ರೋಶ

Date:

Advertisements

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ಜಪ್ತಿ ಮಾಡಿದ್ದ ಜಾರಿ ನಿರ್ದೇಶನಾಲಯದ ಕ್ರಮವನ್ನು  ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಖಂಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಾರಿ ನಿರ್ದೇಶನಾಲಯದ ನಡೆ ಕೇಂದ್ರ ಸರ್ಕಾರದ ಕೃಪಾ ಪೋಷಿತ ಕೀಳು ಮಟ್ಟದ ರಾಜಕೀಯ ನಡೆಯಾಗಿದೆ. ತನಿಖಾ ಸಂಸ್ಥೆಯು ಕೇಂದ್ರದ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸಿಬಲ್ ಆರೋಪಿಸಿದ್ದಾರೆ.

“ಅಜ್ಞಾನವೇ ಆನಂದವಾಗಿರುವಾಗ, ಬುದ್ಧಿವಂತರಾಗಿರುವುದು ಮೂರ್ಖತನ. ಇಡಿ ಕಾನೂನಿನ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ನಾನು ಭಾವಿಸುತ್ತೇನೆ. ಷೇರುದಾರರು ಷೇರುದಾರಾಗಿದ್ದರೆ, ಆಸ್ತಿಯು ಕಂಪನಿಯ ಮಾಲೀಕತ್ವದಲ್ಲಿದೆ. ಕಂಪನಿಯು ದಿವಾಳಿಯಾದರೆ ಷೇರುದಾರರಿಗೆ ಏನೂ ಸಿಗುವುದಿಲ್ಲ. ಹಾಗಾದರೆ ಯಾರು ಯಾರಿಗೆ ಮೋಸ ಮಾಡಿದರು? ಎಲ್ಲಿ ನಂಬಿಕೆಯ ಉಲ್ಲಂಘನೆ? ಯಾರು ಪಿತೂರಿ ಮಾಡಿದ್ದಾರೆ? ಇಡಿಗೂ, ನ್ಯಾಯಾಲಯಗಳಿಗೂ ಕಾನೂನು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ನಾನು ಈ ಘಟನೆಯಿಂದ ಸ್ವಲ್ಪ ದಿಗ್ಭ್ರಮೆಗೊಂಡಿದ್ದೇನೆ,” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಮತ ನೀಡದವರಿಗೆ ಕುಡಿಯುವ ನೀರು ನಿರಾಕರಣೆ!

“ಆದರೆ ಇಂದು ದೇಶದಲ್ಲಿ ಏನಾಗಿದೆ ಎಂದರೆ ಇಡಿ ಕೇಂದ್ರದ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದೆ. ಹೆಚ್ಚು ಮುಖ್ಯವಾದ ಇನ್ನೊಂದು ವಿಷಯವೆಂದರೆ ನ್ಯಾಷನಲ್‌ ಹೆರಾಲ್ಡ್ ಸೆಕ್ಷನ್ 25ರ ಕಂಪನಿಯಾಗಿದೆ. ಅದು ಲಾಭದ ಕಂಪನಿಯಲ್ಲ. ಎಜಿಎಲ್ ಸಂಸ್ಥೆಯನ್ನು ಸ್ಥಗಿತಗೊಳಿಸಿದರೆ, ಅದು ಮತ್ತೊಂದು ಲಾಭರಹಿತ ಕಂಪನಿಗೆ ಸೇರ್ಪಡೆಯಾಗುತ್ತದೆ. ಯಂಗ್ ಇಂಡಿಯಾ ಮತ್ತೊಂದು ಲಾಭರಹಿತ ಸಂಸ್ಥೆಯಾಗಿದೆ” ಎಂದು ಹೇಳಿದರು.

“ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿಗೆ ಸೋಲಿನ ಮುನ್ಸೂಚನೆ ಗೋಚರಿಸಿದೆ. ಡಿಸೆಂಬರ್ 3 ರ ಫಲಿತಾಂಶ ಹೊರಬೀಳಲಿದ್ದು, ಜನರ ಗಮನವನ್ನು ಬೇರೆಡೆ ಸೆಳೆಯುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ” ಎಂದು ಸಿಬಲ್ ತಿಳಿಸಿದರು.

ಯುಪಿಎ 1 ಮತ್ತು 2ರ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಕಪಿಲ್ ಸಿಬಲ್, ಕಳೆದ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾದರು.

ಇಡಿ ಕ್ರಮವನ್ನು “ಸೇಡು ತೀರಿಸಿಕೊಳ್ಳುವ ತಂತ್ರ” ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಈ ಸಂಸ್ಥೆಯು ಬಿಜೆಪಿಯ ‘ಸಮ್ಮಿಶ್ರ ಪಾಲುದಾರ’ನಾಗಿದ್ದು, ಚುನಾವಣೆಗಳಲ್ಲಿ ಸೋಲುವ ಭೀತಿಯಿಂದ ಈ ರೀತಿ ಮಾಡಲಾಗುತ್ತಿದೆ” ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X