ರಾಯಚೂರು ವಿವಿಗಾಗಿ ಭೂಮಿ ಕಳೆದುಕೊಂಡರಿಗೆ ಪರಿಹಾರ ನೀಡುವಂತೆ ಆಗ್ರಹ

Date:

Advertisements

ರಾಯಚೂರು ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಪಟ್ಟಾದಾರರು ಮತ್ತು ಸಾಗುವಳಿದಾರರಿಗೆ ಪರಿಹಾರ ನೀಡಿ ಉದ್ಯೋಗ ಒದಗಿಸುವಂತೆ ಜೆಡಿಎಸ್ ಒತ್ತಾಯಿಸಿದೆ.

ರಾಯಚೂರು ವಿಶ್ವವಿದ್ಯಾಲಯದ ಕಲಪತಿಗಳನ್ನು ಭೇಟಿ ಮಾಡಿದ ಜೆಡಿಎಸ್ ಮುಖಂಡ ನಿಜಾಮುದ್ದೀನ್ ಮತ್ತು ರೈತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಯರಗೇರಾ ಸೀಮಾಂತರ ಸರ್ವೇ ನಂ.347ರಲ್ಲಿದ್ದ 20 ಮಂದಿ ಭೂಮಾಲೀಕರು ಮತ್ತು 11 ಮಂದಿ ರೈತರಿಂದ 250 ಎಕರೆ ಭೂಮಿಯನ್ನು 192-93ರಲ್ಲಿ ಸ್ನಾತಕೋತ್ತರ ಕೇಂದ್ರದ ಸ್ಥಾಪನೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅಂದಿನ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಮುನಿಯಮ್ಮ ಅವರು ಭೂಮಿ ಕಳೆದುಕೊಂಡವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು” ಎಂದು ವಿವರಿಸಿದ್ದಾರೆ.

“ಅದರೆ, ರೈತರಿಗೆ ಯಾವುದೇ ಪರಿಹಾರವಾಗಲೀ, ಉದ್ಯೋಗವಾಗಲಿ ಈವರೆಗೂ ದೊರೆತಿಲ್ಲ. ಕೃಷಿಯನ್ನೇ ನಂಬಿ ಈವನ ಸಾಗಿಸುತ್ತಿದ್ದ ಕುಟುಂಬಗಳು ಈಗ ಬದುಕು ದೂಡಲು ಪರದಾಡುವಂತಾಗಿದೆ. ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಮತ್ತು ವಿಶ್ವವಿದ್ಯಾಲಯದಲ್ಲಿರುವ ಬೋಧಕೇತರ ಹುದ್ದೆಗಳಲ್ಲಿ ಶೇ.50ರಷ್ಟು ಹುದ್ದೆಗಳನ್ನು ಈ ಕುಟುಂಬಗಳಿಗೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

Advertisements

ಹಕ್ಕೊತ್ತಾಯ ಸಲ್ಲಿಸಿವು ವೇಳೆ ಸಂತ್ರಸ್ತ ರೈತ ಪರಶಪ್ಪ, ರಾಮಪ್ಪ, ತಾಯಣ್ಣ, ಹನುಮಂತ, ಬೊಡ್ಡಯ್ಯ, ತಿಮ್ಮಪ್ಪ, ದೇವದಾಸ, ಚನ್ನಕೃಷ್ಣ, ತಿಪ್ಪಯ್ಯ, ರಾಮು, ಭೀಮಕ್ಕ, ಮುನಿಯಪ್ಪ ಸೇರಿ ಅನೇಕರಿದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X