ಕಲಬುರಗಿ | ನಿಶ್ಚಿತ ಪಿಂಚಣಿ ಜಾರಿಗೊಳಿಸಲು ಪಿಂಚಣಿ ವಂಚಿತ ಸಂಘ ಆಗ್ರಹ

Date:

Advertisements

ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಸರ್ಕಾರಿ, ಖಾಸಗಿ (ಪದವಿ ಪೂರ್ವ) ವೃತ್ತಿ ಶಿಕ್ಷಣ (ಜೆ.ಓಸಿ) ಹಾಗೂ ವಿವಿಧ ಇಲಾಖೆಯಿಂದ ವಿಲೀನಗೊಂಡ ನೌಕರರಿಗೆ ಸೇವೆಗೆ ಸೇರಿದ ದಿನಾಂಕ ಪರಿಗಣಿಸಿ ನಿಶ್ಚಿತ ಪಿಂಚಣಿ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.

ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಪದವಿ ಪೂರ್ವ (ಜೆ.ಓ.ಸಿ.) ವೃತ್ತಿ ಶಿಕ್ಷಣ ಇಲಾಖೆಯಿಂದ ವಿವಿಧ ಇಲಾಖೆ ವಿಲೀನಗೊಂಡ ನೌಕರರ ಸಂಘದ ಅಧ್ಯಕ್ಷ ಮಲ್ಲಿನಾಥ ಕಳಸ್ಕರ್ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ರಾಜ್ಯದಲ್ಲಿ ಸುಮಾರು 20-25 ವರ್ಷಗಳಿಂದ ವೃತ್ತಿ ಶಿಕ್ಷಣ ಸರಕಾರಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದವರನ್ನು ಸರಕಾರ 2010-11ರಲ್ಲಿ ವಿಶೇಷ ಕಾನೂನು ಜಾರಿ ಮಾಡಿ ಆಯಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರನ್ನು ಖಾಯಂಗೊಳಿಸಲಾಗಿದೆ. ಆದರೆ ಖಾಯಂಗೊಂಡ ನೌಕರದಾರರಿಗೆ ನಿವೃತ್ತಿ ಹೊಂದಿದ ನಂತರ ಯಾವುದೇ ಸೇವಾ ಭದ್ರತೆ ಸಿಕ್ಕಿರುವುದಿಲ್ಲ. ನಿವೃತ್ತಿಯಾದ ನೌಕರರು ನಿವೃತ್ತಿ ವೇತನದಿಂದ ವಂಚಿತರಾಗಿದ್ದಾರೆ” ಎಂದು ಹೇಳಿದರು.

Advertisements

ನಿವೃತ್ತಿಯಾದ ನೌಕರರಲ್ಲಿ ಹಲವು ಜನ ಮೃತಪಟ್ಟಿದ್ದಾರೆ, ಸೇವೆ ಸಲ್ಲಿಸುವ ಸಂದರ್ಭದಲ್ಲಿಯೂ ಕೂಡಾ ಮೃತಪಟ್ಟಿದ್ದಾರೆ. ಆದರೆ ಇವರಿಗೆ ಸರಕಾರಿ ನೌಕರರಿಗೆ ಸಿಗುವ ಯಾವುದೇ ಸೌಲಭ್ಯಗಳು ಸಿಕ್ಕಿರುವುದಿಲ್ಲ. ನಿವೃತ್ತಿ ಹೊಂದಿದ ಮತ್ತು ಸೇವೆಯಲ್ಲಿ ಮೃತಪಟ್ಟ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಸದರಿ ನೌಕರರಿಗೆ ಸರಕಾರಿ ನೌಕರರಿಗೆ ಸಿಗುವ ಎಲ್ಲಾ ಸವಲತ್ತುಗಳು ಸಿಗಬೇಕು” ಎಂದು ಒತ್ತಾಯಿಸಿದರು.

“ಈಗಾಗಲೇ ನಿವೃತ್ತಿ ಹೊಂದಿದ ನೌಕರರಿಗೆ ನಿವೃತ್ತಿ ವೇತನ ಸೌಲಭ್ಯ ಒದಗಿಸಿಕೊಡಬೇಕು. ಸೇವೆ ಸಲ್ಲಿಸುವ ವೇಳೆ ಮೃತಪಟ್ಟ ಕುಟುಂಬದ ಸದಸ್ಯರಿಗೆ ಅನುಕಂಪ ಆಧಾರದ ಮೇಲೆ ಸರಕಾರಿ ಹುದ್ದೆಗೆ ನೇಮಕ ಮಾಡಿಕೊಳ್ಳಬೇಕು. ಮಾನವಿಯತೆಯ ಆಧಾರದ ಮೇಲೆ ಸದರಿ ನೌಕರರಿಗೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅನಾಥ ಮಕ್ಕಳ ತಂಗುದಾಣ ವಿರುದ್ಧ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ಎನ್.ಎಸ್.ಪೂಜಾರಿ, ಜಗನ್ನಾಥ ಮೋದಿ, ಕಾಶಿಂ ಪಟೇಲ್, ಕಾಡಾದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X