ರಾಷ್ಟ್ರಪಿತ ಮಹಾತ್ಮ ಗಾಂಧಿ ಜಗತ್ತಿನ ಹಲವಾರು ನಾಯಕರ ಮೇಲೆ ಪ್ರಭಾವ ಬೀರಿದ್ದಾರೆ. ಗಾಂಧೀಜಿಯವರ ವಿಚಾರಗಳು, ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು ಮಹಾತ್ಮ ಗಾಂಧಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ನೀಲೇಶ್ ಬೆನಾಳ್ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಯೋಜಿಸಿದ್ದ ‘ಮಹಾತ್ಮ ಗಾಂಧಿ ಮತ್ತು ಯುವ ಮನಸ್ಸು’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಗಾಂಧೀಜಿ ಮೂರು ಬಾರಿ ವಿಜಯಪುರಕ್ಕೆ ಬಂದು ಹೋಗಿದ್ದಾರೆ. ಅಸ್ಪೃಶ್ಯತೆ ನಿವಾರಣೆಯ ಕುರಿತು ಜಾಗೃತಿ ಮೂಡಿಸಿದ್ದಾರೆ” ಎಂದರು.
ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿ ಮಾಲಾ, “ಗಾಂಧೀಜಿ ವಿಚಾರಧಾರೆಗಳನ್ನು ಅನುಸರಿಸುವಲ್ಲಿ ಮತ್ತು ಸಮಾನಕ್ಕೆ ತಿಳಿಸುವಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ಗಾಂಧೀಜಿಯವರ ವಿಚಾರಗಳು ಆರ್ಥಿಕ ಹಾಗೂ ಸಾಮಾಜಿಕ ನೆಲೆಯಲ್ಲಿ ಪ್ರಸ್ತುತ ಕಾಲಕ್ಕೆ ಅತ್ಯಂತ ಪೂರಕವಾಗಿವೆ” ಎಂದರು.
ಕಾರ್ಯಕ್ರಮದಲ್ಲಿ ಗಾಂಧಿವಾದಿ ಅಪ್ಪಸಾಹೇಬ ಯರೆನಾಳ್, ಸಿಕ್ಕಾಬ್ ಮಹಿಳಾ ಮಹಾವಿದ್ಯಾಲಯದ ಮುಖ್ಯಸ್ಥ ಡಾ. ರಿಯಾಜ್ ಫಾರೂಕಿ, ಗಾಂಧಿ ಭವನ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ವಿಜಯಪುರದ ಖಾದಿ ಗ್ರಾಮೋದ್ಯೋಗ ಅಧ್ಯಕ್ಷ ಬಾಪು ಗೌಡ್ ಪಾಟೀಲ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾಕ್ಟರ್ ಅಮರ್ನಾಥ್ ಪ್ರಜಾಪತಿ, ವಿದ್ಯಾರ್ಥಿನಿ ಪಲ್ಲವಿ ಪಥಾಟೆ,ಸಹಾಯಕ ಪ್ರಾಧ್ಯಾಪಕ ಸಂದೀಪ್ ಇದ್ದರು.