ವಿಜಯಪುರ | ‘ಮಹಾತ್ಮ ಗಾಂಧಿ ಮತ್ತು ಯುವ ಮನಸ್ಸು’ ಉಪನ್ಯಾಸ ಕಾರ್ಯಕ್ರಮ

Date:

Advertisements

ರಾಷ್ಟ್ರಪಿತ ಮಹಾತ್ಮ ಗಾಂಧಿ ಜಗತ್ತಿನ ಹಲವಾರು ನಾಯಕರ ಮೇಲೆ ಪ್ರಭಾವ ಬೀರಿದ್ದಾರೆ. ಗಾಂಧೀಜಿಯವರ ವಿಚಾರಗಳು, ಸಿದ್ಧಾಂತಗಳು ಇಂದಿಗೂ ಪ್ರಸ್ತುತ ಎಂದು ಮಹಾತ್ಮ ಗಾಂಧಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ನೀಲೇಶ್ ಬೆನಾಳ್ ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಯೋಜಿಸಿದ್ದ ‘ಮಹಾತ್ಮ ಗಾಂಧಿ ಮತ್ತು ಯುವ ಮನಸ್ಸು’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಗಾಂಧೀಜಿ ಮೂರು ಬಾರಿ ವಿಜಯಪುರಕ್ಕೆ ಬಂದು ಹೋಗಿದ್ದಾರೆ. ಅಸ್ಪೃಶ್ಯತೆ ನಿವಾರಣೆಯ ಕುರಿತು ಜಾಗೃತಿ ಮೂಡಿಸಿದ್ದಾರೆ” ಎಂದರು.

Advertisements

ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿ ಮಾಲಾ, “ಗಾಂಧೀಜಿ ವಿಚಾರಧಾರೆಗಳನ್ನು ಅನುಸರಿಸುವಲ್ಲಿ ಮತ್ತು ಸಮಾನಕ್ಕೆ ತಿಳಿಸುವಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ಗಾಂಧೀಜಿಯವರ ವಿಚಾರಗಳು ಆರ್ಥಿಕ ಹಾಗೂ ಸಾಮಾಜಿಕ ನೆಲೆಯಲ್ಲಿ ಪ್ರಸ್ತುತ ಕಾಲಕ್ಕೆ ಅತ್ಯಂತ ಪೂರಕವಾಗಿವೆ” ಎಂದರು.

ಕಾರ್ಯಕ್ರಮದಲ್ಲಿ  ಗಾಂಧಿವಾದಿ ಅಪ್ಪಸಾಹೇಬ ಯರೆನಾಳ್, ಸಿಕ್ಕಾಬ್ ಮಹಿಳಾ ಮಹಾವಿದ್ಯಾಲಯದ ಮುಖ್ಯಸ್ಥ ಡಾ. ರಿಯಾಜ್ ಫಾರೂಕಿ, ಗಾಂಧಿ ಭವನ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ವಿಜಯಪುರದ ಖಾದಿ ಗ್ರಾಮೋದ್ಯೋಗ ಅಧ್ಯಕ್ಷ ಬಾಪು ಗೌಡ್ ಪಾಟೀಲ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾಕ್ಟರ್ ಅಮರ್ನಾಥ್ ಪ್ರಜಾಪತಿ, ವಿದ್ಯಾರ್ಥಿನಿ ಪಲ್ಲವಿ ಪಥಾಟೆ,ಸಹಾಯಕ ಪ್ರಾಧ್ಯಾಪಕ ಸಂದೀಪ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X