ರಾಯಚೂರು | ಕಲ್ಲಿದ್ದಲು ಕಳ್ಳತನ; ಗುತ್ತಿಗೆದಾರ ಮತ್ತು ರೈಲ್ವೇ ಸ್ಟೇಷನ್ ಮಾಸ್ಟರ್ ವಿರುದ್ಧ ಎಫ್‌ಐಆರ್

Date:

Advertisements

ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲನ್ನು ಅಕ್ರಮವಾಗಿ ಸಾಗಾಟ ಮಾಡಿದ್ದ ಪ್ರಕರಣದಲ್ಲಿ ರಾಯಚೂರಿನ ಯರಮರಸ್‌ ರೈಲೈ ನಿಲ್ದಾಣದ ಸ್ಟೇಷನ್ ಮಾಸ್ಟರ್ ಮತ್ತು ಗುತ್ತಿಗೆದಾರ ಶ್ರೀನಿವಾಸುಲು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಲ್ಲಿದ್ದಲು ಕಳ್ಳತನವಾಗಿರುವ ಬಗ್ಗೆ ಯರಮರಸ್ ವಿದ್ಯುತ್ ಉತ್ಪಾದನಾ ಘಟಕದ ಕಾರ್ಯನಿರ್ವಾಹಕ ನಿರ್ದೇಶಕ ಮಹೇಂದ್ರ ಅವರು ರಾಯಚೂರು ಗ್ರಾಮೀಣ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಕುರಿತು ಕೆಪಿಟಿಸಿಎಲ್‌ ತನಿಖಾ ಸಮಿತಿ ತನಿಖೆ ನಡೆಸಿದ್ದು, ಕಳ್ಳತನ ಬಯಲಿಗೆ ಬಂದಿದೆ.

ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡಬೇಕಿದ್ದ ಕಲ್ಲಿದ್ದಲನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಅನಧಿಕೃತ ಜಾಗಕ್ಕೆ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಕ್ರಮದಲ್ಲಿ ಸ್ಟೇಷನ್ ಮಾಸ್ಟರ್ ಮತ್ತು ಗುತ್ತಿಗೆದಾರರ ಕೈವಾಡ ಇರುವುದು ಕಂಡುಬಂದಿದ್ದು, ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

Advertisements

ಶ್ರೀನಿವಾಸುಲು ಅವರು ರಾಘವೇಂದ್ರ ಎಂಟರ್ ಪ್ರೈಸಸ್ ಹೆಸರಿನಲ್ಲಿ ರೈಲ್ವೆ ವ್ಯಾಗನ್ ಸ್ಬಚ್ಛಗೊಳಿಸುವ ಗುತ್ತಿಗೆ ಪಡೆದಿದ್ದರು. ಅವರು ಕಳೆದ ವಾರ (ನವೆಂಬರ್ 19, 20) ಐದು ಲಕ್ಷ ಮೌಲ್ಯದ 120 ಮೆಟ್ರಿಕ್ ಟನ್ ಕಚ್ಚಾ ಕಲ್ಲಿದ್ದಲು ಕಳ್ಳತನ ಮಾಡಿ, ಯರಮರಸ್ ರೈಲು ನಿಲ್ದಾಣದ ಹೊರ ಭಾಗದಲ್ಲಿ ಶೇಖರಿಸಿದ್ದರು ಎಂದು ಆರೋಪಿಸಲಾಗಿದೆ.

ವ್ಯಾಗನ್‌ನಲ್ಲಿ ಬರುವ ಕಲ್ಲಿದ್ದಲನ್ನು ವಿದ್ಯುತ್‌ ಘಟಕಗಳ ಪ್ರಾಂಗಣದಲ್ಲಿ ಸಂಪೂರ್ಣವಾಗಿ ಸುರಿಯಬೇಕು. ವ್ಯಾಗನ್ ಖಾಲಿಯಾದ ಬಳಿಕ ರೈಲು ಹಿಂದಿರುಗಲು ಹಸಿರು ನಿಶಾನೆ ನೀಡಬೇಕು. ಆದರೆ, ವ್ಯಾಗನ್‌ಗಳಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲನ್ನು ಉಳಿಸಿಕೊಂಡು, ರೈಲನ್ನು ವಾಪಸ್ ಕಳುಹಿಸಲಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X