ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲ್ಲ, ತಿಹಾರ್ ಜೈಲಿಗೆ ಹೋಗ್ತಾರೆ: ಕೆ ಎಸ್ ಈಶ್ವರಪ್ಪ

Date:

Advertisements
  • ಡಿ.ಕೆ.ಶಿವಕುಮಾರ್ ಪ್ರಕರಣ ವಾಪಸ್, ಸರಕಾರ ಬೀಳುವುದರ ಮೊದಲ ಹೆಜ್ಜೆ ಇದು: ಈಶ್ವರಪ್ಪ
  • ಹಾವೇರಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

“ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣ ವಾಪಸ್ ಪಡೆದಿರುವುದು ಸರ್ಕಾರ ಬಿದ್ದು ಹೋಗುವುದರ ಮೊದಲ ಹೆಜ್ಜೆ. ಶಿವಕುಮಾರ್ ಅವರು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ಬದಲಾಗಿ ತಿಹಾರ್ ಜೈಲಿಗೆ ಹೋಗುತ್ತಾರೆ” ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸರಕಾರ ಬೀಳಲು ಎರಡನೆಯ ಹೆಜ್ಜೆ ಅಂದರೆ ಜಾತಿಗಣತಿ. ಒಂಭತ್ತು ವರ್ಷದ ಹಿಂದೆ ಜಾತಿ ಗಣತಿ ಮಾಡಲಾಗಿತ್ತು. ಆದರೆ ಅದನ್ನು ಈವರೆಗೆ ಬಹಿರಂಗಪಡಿಸಿಲ್ಲ. ಸಿಎಂ ಸಿದ್ದರಾಮಯ್ಯನವರಿಗೆ ತಾನು ಹಿಂದುಳಿದ ವರ್ಗದ ಚಾಂಪಿಯನ್ ಅನಿಸಿಕೊಳ್ಳಬೇಕಿತ್ತು. ಅದಕ್ಕಾಗಿ 163 ಕೋಟಿ ರೂಪಾಯಿ ವ್ಯರ್ಥ ಖರ್ಚು ಮಾಡಿದ್ದಾರೆ” ಎಂದು ಕೆಎಸ್‌ ಈಶ್ವರಪ್ಪ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ಹೊರಹಾಕಿದರು.

ಇದನ್ನು ಓದಿದ್ದೀರಾ? ‘ಜೋಡು ಕರೆ’ಯನ್ನು ಉದ್ಘಾಟಿಸಿ ‘ಬೆಂಗಳೂರು ಕಂಬಳ’ಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

Advertisements

‘ಮೂರು ತಿಂಗಳ ಹಿಂದೆ ಹಿಂದುಳಿದ ವರ್ಗಗಳ ದಲಿತ ಮಠಾಧೀಶರು ಜಾತಿಗಣತಿ ಬಹಿರಂಗ ಮಾಡುವಂತೆ ಸಿಎಂ ಸಿದ್ದರಾಮಯ್ಯ ಬಳಿ ಹೋಗಿದ್ದರು  ಅಂದು ಸಿಎಂ ಸಿದ್ದರಾಮಯ್ಯ ನವೆಂಬರ್ ತಿಂಗಳಲ್ಲಿ ಬಹಿರಂಗ ಮಾಡುವುದಾಗಿ ತಿಳಿಸಿದ್ದರು. ಆದರೆ ಇನ್ನೂ ಬಹಿರಂಗ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿಗಣತಿ ಬಗ್ಗೆ ಆಸಕ್ತಿ ಇಲ್ಲ’ ಎಂದು ಕೆ ಎಸ್ ಈಶ್ವರಪ್ಪ ಆರೋಪಿಸಿದರು.

ಪ್ರತಿಪಕ್ಷ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಆಯ್ಕೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಮುಖಂಡ, “ಉತ್ತರ ಕರ್ನಾಟಕಕ್ಕೆ ಸ್ಥಾನ ನೀಡಬೇಕಿತ್ತು ಎನ್ನುವ ನೋವಿದೆ. ಅವರು ಹಿರಿಯರು. ಅವರನ್ನು ನಮ್ಮ ಹಿರಿಯ ನಾಯಕರು ಕರೆಸಿ ಮಾತನಾಡುತ್ತಾರೆ. ದೇಶದಲ್ಲಿ ಬಿಜೆಪಿ ಇರುವುದು ಒಂದೇ. ಆದರೆ, ಎಷ್ಟು ಕಾಂಗ್ರೆಸ್ ಇವೆ” ಎಂದು ಈಶ್ವರಪ್ಪ ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X