ಬಿಜೆಪಿಗೆ ಮರಳಿ ಹೋಗುವ ಬಗ್ಗೆ ಕನಸು ಮನಸಿನಲ್ಲೂ ಯೋಚಿಸಿಲ್ಲ: ಗಾಲಿ ಜನಾರ್ದನ ರೆಡ್ಡಿ

Date:

Advertisements
  • ಬಿಜೆಪಿ ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ
  • ಸ್ವತಂತ್ರವಾಗಿಯೇ ಮುಂದೆ ಹೋಗುತ್ತೇನೆ: ಗಾಲಿ ಜನಾರ್ದನ ರೆಡ್ಡಿ 

ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್​ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಯೋಚನೆಯೇ ಮಾಡಿಲ್ಲ. ಕೆಆರ್​ಪಿಪಿ ಪಕ್ಷದ ಸ್ಥಾಪಿಸಿದಾಗ ಯಾರೆಲ್ಲಾ ಎಷ್ಟೇ ಪ್ರಯತ್ನಿಸಿದರೂ ಯಾರ ಜೊತೆಗೂ ನಾನು ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ನಾನು ಮುಂದೆ ಹೋಗುತ್ತೇನೆ” ಎಂದರು.

“ಕಲ್ಯಾಣ ಕರ್ನಾಟಕ ಭಾಗದಲ್ಲಿ ನನ್ನ ಸಹಾಯ ಕೇಳುವ ಪರಿಸ್ಥಿತಿಯಲ್ಲಿ ಬಿಜೆಪಿ ಇಲ್ಲ. ಯಡಿಯೂರಪ್ಪ ಅವರನ್ನು ತಂದೆಯ ಸ್ಥಾನದಲ್ಲಿ ಗೌರವಿಸಿದರೆ, ಶ್ರೀರಾಮುಲು ಅವರನ್ನು ಮಗು ರೂಪದಲ್ಲಿ ನೋಡುತ್ತೇನೆ. ಅವರು ಆಯಾ ಪಕ್ಷದಲ್ಲಿ ಚೆನ್ನಾಗಿರಲಿ ಎಂದು ಬಯಸುವೆ ಹೊರತು ಅವರನ್ನು ಆಹ್ವಾನ ಮಾಡಲ್ಲ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಆರನೇ ವರದಿ ಸರ್ಕಾರಕ್ಕೆ ಸಲ್ಲಿಕೆ

ರಾಜಕೀಯಕ್ಕಾಗಿ ಕೌಟುಂಬಿಕ ಸಂಬಂಧ ಕಡಿದುಕೊಂಡ ವಿಚಾರವಾಗಿ ಪ್ರತಿಕ್ರಿಯಿಸಿ, “ರಾಜಕೀಯ, ಸಿದ್ಧಾಂತ ಇಟ್ಟುಕೊಂಡು ನಾನು ಹೋಗುವಾಗ ಯಾವ ಸ್ನೇಹ, ಸಂಬಂಧದ ಪ್ರಶ್ನೆ ಬರುವುದೇ ಇಲ್ಲ. ನನ್ನ ಯೋಚನೆ, ಯೋಜನೆಗಳೇ ಪ್ರತ್ಯೇಕವಾಗಿರುವಾಗ ನನ್ನ ಹಾದಿಯಲ್ಲೇ ನಾನು ಹೋಗುತ್ತೇನೆ” ಎಂದು ಹೇಳಿದರು.

“ಲೋಕಸಭಾ ಚುನಾವಣೆ ದೃಷ್ಟಿಯಿಂದ ಯಾರೂ ನನ್ನ ಸಂಪರ್ಕ ಮಾಡಿಲ್ಲ, ನಾನೂ ಯಾರನ್ನೂ ಸಂಪರ್ಕ ಮಾಡಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಫರ್ಧೆ ಮಾಡುವುದಿಲ್ಲ. ಆದರೆ, ಎಂಟು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಲಸ ಮಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X