ಅಸ್ಪೃಶ್ಯತೆ ಆಚರಣೆ ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತದೆ: ಹೈಕೋರ್ಟ್‌

Date:

Advertisements

ಆಧುನಿಕ ಯುಗದಲ್ಲಿಯೂ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಆಘಾತಕಾರಿ. ಅಸ್ಪೃಶ್ಯತೆ ಆಚರಣೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತವೆ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.

2016ರಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ವಿನಾಯಕ ನಗರದಲ್ಲಿ ದಲಿತ ಸಮುದಾಯದ ಸಾವಿತ್ರಮ್ಮ ಕುಟುಂಬಸ್ಥರು ಗಡಿಚೌಡೇಶ್ವರ ದೇವಾಯಲಕ್ಕೆ ತೆರಳಿದ್ದರು. ಈ ವೇಳೆ, ಅವರು ತಳ ಸಮುದಾಯದವರು ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಪ್ರವೇಶ ನಿಕಾರಿಸಲಾಗಿತ್ತು. ಪ್ರಶ್ನಿಸಿದ್ದಕ್ಕಾಗಿ ಸಾವಿತ್ರಮ್ಮ ಮತ್ತು ಕುಟುಂಬಸ್ಥರ ಮೇಲೆ ಪ್ರಬಲ ಜಾತಿಯವರು ಹಲ್ಲೆ ನಡೆಸಿದ್ದರು.

ಅವರ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಪಾಂಡುರಂಗ ಭಟ್‌, ಕುಮಾರಿ ಉಷಾ, ಕುಮಾರಿ ಶಾರದಾ, ವಿಲಾಸ್‌ ಲಾಡವ, ವೆಂಕಟನಾರಾಯಣ, ಚಿದಾನಂದ, ರವಿ ಮತ್ತು ಉಮಾ ಎಂಬವರು ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Advertisements

ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪಾಂಉರಂಗ ಭಟ್‌ ಮತ್ತು ಏಳು ಮಂದಿ ಆರೋಪಿಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

“ದೇವಾಲಯಗಳು ಏಕತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಪ್ರದೇಶಗಳಾಗಿವೆ. ಅಲ್ಲಿ, ಅಸ್ಪೃಶ್ಯತೆ ಆಚರಣೆ ಮಾಡುವುದು, ದಲಿತರಿಗೆ ಪ್ರವೇಶ ನಿರಾಕರಿಸುವುದು ಸಂವಿಧಾನಬಾಹಿರವಾಗಿದೆ. ಇಂತಹ ಬೆಳವಣಿಗೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸುತ್ತವೆ” ಎಂದು ಹೈಕೋರ್ಟ್‌ ಹೇಳಿದೆ.

“ಮನುಷ್ಯರು ಮನುಷ್ಯರಂತೆ ನಡೆದುಕೊಳ್ಳಬೇಕು. ತಾರತಮ್ಯಗಳು ಇಲ್ಲಬೇಕು” ಎಂದು ಹೈಕೋರ್ಟ್‌ ಒತ್ತಿ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X