ರಾಜಸ್ಥಾನ: ಬಹುತೇಕ ಶಾಂತಿಯುತ ಚುನಾವಣೆ; ಶೇ.71.64ರಷ್ಟು ಮತದಾನ

Date:

Advertisements

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ರಾಜ್ಯದಲ್ಲಿ ಒಟ್ಟು 71.64ರಷ್ಟು ಮತದಾನ ನಡೆದಿದೆ.

ಆದಾಗ್ಯೂ, ಸಿಕಾರ್ ಮತ್ತು ದೀಗ್ ಜಿಲ್ಲೆಗಳಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದು, ಧೋಲ್ಪುರದಲ್ಲಿ ಹಿಂಸಾಚಾರ ವರದಿಯಾಗಿದೆ.

ರಾಜ್ಯದ ಒಟ್ಟು 200 ಸ್ಥಾನಗಳ ಪೈಕಿ 199 ಸ್ಥಾನಗಳಲ್ಲಿ 1,862 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅವರ ಆಯ್ಕೆಗಾಗಿ ಮತದಾನ ನಡೆದಿದೆ. ಏಳು ಜನ ಪಕ್ಷೇತರರು ಮತ್ತು ಬಿಜೆಪಿಯಿಂದ ಬಂದ ಒಬ್ಬರು ಸೇರಿದಂತೆ 97 ಹಾಲಿ ಶಾಸಕರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಆದರೆ ಪ್ರತಿಪಕ್ಷ ಬಿಜೆಪಿ ಆರು ಲೋಕಸಭಾ ಸದಸ್ಯರು ಮತ್ತು ಒಬ್ಬ ರಾಜ್ಯಸಭಾ ಸದಸ್ಯ ಹಾಗೂ 59 ಶಾಸಕರಿಗೆ ಟಿಕೆಟ್ ನೀಡಿದೆ.

Advertisements

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಾಸ್ರಾ, ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ, ಶಾಂತಿ ಧರಿವಾಲ್, ಬಿಡಿ ಕಲ್ಲ, ಭನ್ವರ್ ಸಿಂಗ್ ಭಾಟಿ, ಸಲೇಹ್ ಮೊಹಮ್ಮದ್, ಮಮತಾ ಭೂಪೇಶ್, ಪ್ರತಾಪ್ ಸಿಂಗ್ ಖಚರಿಯಾವಾಸ್, ರಾಜೇಂದ್ರ ಸೇರಿದಂತೆ ಹಲವು ಸಚಿವರು ಕಣದಲ್ಲಿದ್ದಾರೆ.

ಬಿಜೆಪಿಯಲ್ಲಿ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ವಿರೋಧ ಪಕ್ಷದ ಉಪನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಸಂಸದರಾದ ದಿಯಾ ಕುಮಾರಿ, ರಾಜ್ಯವರ್ಧನ್ ರಾಥೋಡ್, ಬಾಬಾ ಬಾಲಕನಾಥ್ ಮತ್ತು ಕಿರೋಡಿ ಲಾಲ್ ಮೀನಾ ಕಣದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ: ಪ್ರಶ್ನೆಗಾಗಿ ಲಂಚ ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಸಿಬಿಐ

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಕಾಂಗ್ರೆಸ್, ಬಿಜೆಪಿ ಅಲ್ಲದೇ ಆಮ್ ಆದ್ಮಿ ಪಾರ್ಟಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಭಾರತೀಯ ಟ್ರೈಬಲ್ ಪಾರ್ಟಿ, ಭಾರತ್ ಆದಿವಾಸಿ ಪಾರ್ಟಿ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷಗಳು ಕೂಡ ಚುನಾವಣಾ ಕಣದಲ್ಲಿವೆ.

ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X