ಬಲಾಢ್ಯರು ಅಂಚಿನಲ್ಲಿರವವರ ಮೇಲೆ ಪ್ರಾಬಲ್ಯ ಸಾಧಿಸಲು ರಾಜ್ಯಗಳು ಅವಕಾಶ ನೀಡಬಾರದು; ಸಿಜೆಐ ಡಿ ವೈ ಚಂದ್ರಚೂಡ್

Date:

Advertisements

ಸ್ವಾತಂತ್ರ್ಯ ಎಂದರೆ ವ್ಯಕ್ತಿಯ ಆಯ್ಕೆಗಳಲ್ಲಿ ರಾಜ್ಯವು ಹಸ್ತಕ್ಷೇಪ ಮಾಡದಿರುವುದು ಎನ್ನುವ ಅರ್ಥವಿದೆ. ಆದರೆ, ಹಾಗೆ ಮಧ್ಯಪ್ರವೇಶಿಸದಿದ್ದರೆ, ಸಾಮಾಜಿಕ ಮತ್ತು ಆರ್ಥಿಕ ಬಂಡವಾಳ ಹೊಂದಿರುವ ಬಲಾಢ್ಯ ಸಮುದಾಯಗಳು ಅಂಚಿನಲ್ಲಿರುವವರ ಮೇಲೆ ಪ್ರಾಬಲ್ಯ ಸಾಧಿಸಲು ರಾಜ್ಯವು ಸ್ವಯಂಚಾಲಿತವಾಗಿ ಅವಕಾಶ ನೀಡಿದಂತಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅಭಿಪ್ರಾಯ ಪಟ್ಟಿದ್ದಾರೆ.

ಶನಿವಾರ ಖಾಸಗಿ ಹೋಟೆಲ್‌ನಲ್ಲಿ ಏಷಿಯಾ ಮತ್ತು ಪೆಸಿಫಿಕ್ ಕಾನೂನು ಸಂಘದ ವತಿಯಿಂದ ನಾಲ್ಕು ದಿನಗಳ ಕಾಲ ನಡೆಯುತ್ತಿರುವ 36ನೆ ಲಾ ಏಷಿಯಾ ಸಮಾವೇಶದಲ್ಲಿ ‘ಅಸ್ಮಿತೆ, ವ್ಯಕ್ತಿ ಮತ್ತು ಪ್ರಭುತ್ವ: ಸ್ವಾತಂತ್ರ್ಯದ ಹೊಸ ಮಾರ್ಗಗಳು’ ಕುರಿತು ವರ್ಚ್ಯುಯಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು.

‘ಸ್ವಾತಂತ್ರ್ಯ ಎಂದರೆ, ವೈಯಕ್ತಿಕ ಕ್ರಿಯೆಗಳು ಮತ್ತು ನಿರ್ಧಾರಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡದೇ ಇರುವುದು ಎನ್ನುವ ಐತಿಹಾಸಿಕ ಅರ್ಥೈಸುವಿಕೆಗೆ ಇರುವ ಮಿತಿಯನ್ನು ಅರ್ಥಮಾಡಿಕೊಳ್ಳುವುದು ಮುಖ್ಯ’ ಎಂದು ಅವರು ಹೇಳಿದರು. ‘ಯಾವುದೇ ಜ್ಞಾನ ಎಂಬುದು ಸೈದ್ಧಾಂತಿಕವಾಗಿ ತಟಸ್ಥವಲ್ಲ ಮತ್ತು ಅಧಿಕಾರದ ಉದ್ದೇಶದ ಮೇಲೆ ಅನಿಶ್ಚಿತವಾಗಿ ಇರುವುದಿಲ್ಲ. ಸ್ವಾತಂತ್ರ್ಯ ನಮ್ಮ ಪರಿಕಲ್ಪನೆಯಲ್ಲಿನ ಪರಿವರ್ತನಶೀಲತೆಯನ್ನು ಗಮನಿಸಬಹುದು’ ಎಂದು ಅವರು ಹೇಳಿದರು.

Advertisements

‘ರಾಜ್ಯ ಮತ್ತು ಸ್ವಾತಂತ್ರ್ಯದ ನಡುವಿನ ಸಂಬಂಧವನ್ನು ವ್ಯಾಪಕವಾಗಿ ಅರ್ಥಮಾಡಿಕೊಂಡಿದ್ದರೂ, ಗುರುತು ಮತ್ತು ಸ್ವಾತಂತ್ರ್ಯದ ನಡುವಿನ ಸಂಬಂಧವನ್ನು ಸ್ಥಾಪಿಸುವ ಮತ್ತು ವಿವರಿಸುವ ಕಾರ್ಯವು ಅಪೂರ್ಣವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X