ಉತ್ತರ ಕನ್ನಡ | ಹಾಳಾದ ರಸ್ತೆ; ಮಾಗೋಡು ಫಾಲ್ಸ್‌ಗೆ ಬರುವ ಪ್ರವಾಸಿಗರ ಅವ್ಯವಸ್ಥೆ

Date:

Advertisements

ಹಿಂದೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಜಲಪಾತ ನೋಡಲು ಪ್ರವಾಸಿಗರು ಮುಗಿಬೀಳುತ್ತಿದ್ದರು. ಆದರೆ, ಸದ್ಯ ಈ ಸ್ಥಳಕ್ಕೆ ಪ್ರವಾಸಕ್ಕೆ ಬರುವವರ ಸಂಖ್ಯೆ ಬಹಳ ಕಡಿಮೆ ಆಗಿದೆ.

ಪ್ರವಾಸಿ ತಾಣಕ್ಕೆ ಹೋಗಲು ರಸ್ತೆ ಸಂಪರ್ಕ ಹಾಳಾಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎನ್ನುತ್ತಾರೆ ಸ್ಥಳೀಯರು.

ವೀಕೆಂಡ್ ಬಂದರೆ ಸಾಕು ಜನಜಂಗುಳಿಯಿಂದ ತುಂಬುತ್ತಿದ್ದ ಈ ತಾಣದಲ್ಲಿ, ಬೆರಳೆಣಿಕೆಯಷ್ಟು ಜನ ಮಾತ್ರ ಕಾಣಸಿಗುತ್ತಿದ್ದಾರೆ. ಒಮ್ಮೆ ಭೇಟಿ ನೀಡಿದವರು, ಇನ್ನೊಮ್ಮೆ ಇಲ್ಲಿಗೆ ಬರಲು ಮನಸ್ಸು ಮಾಡಲ್ಲ. ಅಲ್ಲದೆ, ಇಲ್ಲಿಗೆ ಹೋಗಬೇಡಿ. ಹೋಗೊದಾದ್ರೆ ಎಚ್ಚರಿಕೆಯಿಂದ ಹೋಗಿ ಎಂದು ಸಲಹೆ ನೀಡುತ್ತಿದ್ದಾರೆ.

Advertisements

ಮಾಗೋಡು ಫಾಲ್ಸ್ ಗೆ ಹೋಗಲು ಇರುವ ರಸ್ತೆ ತುಂಬಾ ಹಾಳಾಗಿದೆ. ಕಾರು, ಟ್ಯಾಕ್ಸಿ ಮೂಲಕ ಈ ಸ್ಥಳಕ್ಕೆ ಬಂದರೆ, ವಾಹನಗಳು ಹಾಳಾಗುವುದು ಖಂಡಿತ ಎನ್ನುವಂತಾಗಿದೆ. ದೂರದೂರಿನಿಂದ ಇಲ್ಲಿಗೆ ಬಂದು ಕಾರು ಹಾಳಾದ್ರೆ ರಿಪೇರಿ ಮಾಡಲು ಕೂಡ ಇಲ್ಲಿ ವ್ಯವಸ್ಥೆಯಿಲ್ಲ. ಹೀಗಾಗಿ ಎಷ್ಟೊ ಜನ ಪ್ರವಾಸಿಗರು ಪರದಾಡಿದ್ದು ಇದೆ.

ಇಲ್ಲಿನ ರಸ್ತೆಗಳು ಭೇಟಿ ನೀಡುವ ಪ್ರತಿಯೊಬ್ಬ ಪ್ರವಾಸಿಗನ ಗೋಳಾಗಿ ಪರಿಣಮಿಸುತ್ತಿವೆ. ಇದರಿಂದ ಇಲ್ಲಿಗೆ ಬರುವ ಪ್ರವಾಸಿಗರು ಪರದಾಡುತ್ತಿದ್ದಾರೆ. ಪ್ರವಾಸಿ ತಾಣಗಳಲ್ಲಿ ಮೂಲಭೂತಸೌಕರ್ಯ, ರಸ್ತೆ, ವಸತಿ ಇತ್ಯಾದಿ ಸೌಲಭ್ಯ ಒದಗಿಸಬೇಕಿರುವ ಇಲಾಖೆಗಳು ಕೈಕಟ್ಟಿ ಕುಳಿತಿವೆ. ಈ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಿದರೆ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎನ್ನುತ್ತಿದ್ದಾರೆ ಸ್ಥಳೀಯರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X