ಎಚ್‌ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿ ವೈ ವಿಜಯೇಂದ್ರ

Date:

Advertisements

ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾನುವಾರ ಭೇಟಿ ಮಾಡಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “ರಾಜ್ಯದ ಹಿತದೃಷ್ಟಿಯಿಂದ ದೆಹಲಿ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಮೈತ್ರಿಯಾಗಿದೆ. ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಕುರಿತು ಕೇಂದ್ರದ ನಾಯಕರು ಮಾತನಾಡಿ, ನಿರ್ಧಾರ ಕೈಗೊಳ್ಳುತ್ತಾರೆ” ಎಂದರು.

“ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷ ಗೆಲ್ಲಬೇಕು. ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕು. ಆ ನಿಟ್ಟಿನಲ್ಲಿ ನಾನು ಪಕ್ಷದ ಅಧ್ಯಕ್ಷನಾದ ಬಳಿಕ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೆ. ಇದೀಗ, ಪಕ್ಷದ ರಾಜ್ಯಾಧ್ಯಕ್ಷರಾದ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ” ಎಂದು ಹೇಳಿದರು.

Advertisements

“ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ಮಾಡುವುದು ನಮ್ಮ ಗುರಿ. ಈ ಕುರಿತು, ನಮ್ಮಲ್ಲಿ ಏನೇ ಗೊಂದಲಗಳಿದ್ದರೂ, ಪರಸ್ಪರ ಚರ್ಚಿಸಿ ಪರಿಹಾರ ಕಂಡುಕೊಳ್ಳುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X