ದಕ್ಷಿಣ ಕನ್ನಡ | ಕಾನ-ಕಟ್ಲ ಜನತಾ ಕಾಲನಿ ಸರ್ಕಾರಿ ಶಾಲೆ ಭೂಮಿ ಒತ್ತುವರಿ; ಜಿಲ್ಲಾಡಳಿತ ನಿರ್ಲಕ್ಷ್ಯ

Date:

Advertisements

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ-ಕಟ್ಲ ಜನತಾಕಾಲನಿ ಇಲ್ಲಿನ 1.60 ಎಕರೆ ಭೂಮಿ ಕಬಳಿಕೆ ವಿರೋಧಿಸಿ ಹೋರಾಟ ಸಮಿತಿಯ ವತಿಯಿಂದ ಶಾಲಾ ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು.‌

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಾನ-ಕಟ್ಲ ಜನತಾ ಕಾಲನಿಯಲ್ಲಿನ ಸರ್ಕಾರಿ ಶಾಲೆಯ ಭೂ ಒತ್ತುವರಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

“ಕಾನ-ಕಟ್ಲ ಜನತಾ ಕಾಲನಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ 1.60 ಎಕರೆಯಷ್ಟು ಭೂಮಿ ಕಬಳಿಕೆಯಾಗಿರುವ ಕುರಿತು ಮಾಧ್ಯಮಗಳಲ್ಲಿ ಸುದ್ದಿಯಾದರೂ ಜಿಲ್ಲಾಡಳಿತವಾಗಲಿ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಾಗಲೀ ಈವರೆಗೆ ಶಾಲೆಗೆ ಭೇಟಿ ನೀಡಿಲ್ಲ. ಭೂ ಹಗರಣವನ್ನು ಗಂಭೀರವಾಗಿ ಪರಿಗಣಿಸದೆ ಇರುವುದು ಸರ್ಕಾರಿ ಶಾಲೆಗಳ ಸಂರಕ್ಷಣೆ ಬಗ್ಗೆ ಜಿಲ್ಲಾಡಳಿತಕ್ಕೆ ಇಚ್ಛಾಶಕ್ತಿ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ” ಎಂದು ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಸಂಚಾಲಕ, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್ ಆರೋಪಿಸಿದರು.

Advertisements

ಸರ್ಕಾರಿ ಶಾಲೆಯ ಭೂಮಿಯನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ನೀಡಿದರೂ ಕೂಡ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕಾನ-ಕಟ್ಲ ಜನತಾಕಾಲನಿ ನಿವಾಸಿಗಳು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ನಡೆಯಲ್ಲ: ಬಡಗಲಪುರ ನಾಗೇಂದ್ರ

ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷೆ ವಾರಿಜ ಹೋರಾಟದ ನೇತೃತ್ವ ವಹಿಸಿದ್ದರು. ಹೋರಾಟ ಸಮಿತಿಯ ಪ್ರಮುಖರುಗಳಾದ ಶರೀಫ್, ಫಾರೂಕ್ ಜನತಾ ಕಾಲನಿ, ಶ್ರೀನಾಥ್ ಕುಲಾಲ್, ಬಿ ಕೆ ಮಕ್ಸೂದ್, ಆಸೀಫ್, ಅಶ್ರಫ್, ಶಬನಾ, ಸಿಸಿಲಿ ಡಿಸೋಜಾ, ಶೈಫರ್ ಆಲಿ, ಅಸ್ಕಾಫ್, ಐ ಮೊಹಮ್ಮದ್, ಸಾದಿಕ್ ಕಿಲ್ಪಾಡಿ, ಹನೀಫ್ ಇಡ್ಯಾ, ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X