ಕೊಪ್ಪಳ | ವ್ಯಕ್ತಿಯ ಮೇಲೆ ನಾಲ್ಕು ಕರಡಿಗಳ ದಾಳಿ; ಗಂಭೀರ ಗಾಯ

Date:

Advertisements

ಕೊಪ್ಪಳ ಜಿಲ್ಲೆಯ ಇರಕಲ್ ಗಡಾ ಹೋಬಳಿ ವ್ಯಾಪ್ತಿಯಲ್ಲಿ ಕರಡಿ ದಾಳಿ ಹೆಚ್ಚುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಇಂದರಗಿಯಲ್ಲಿ ರೈತನ ಮೇಲೆ ದಾಳಿ ನಡೆದಿತ್ತು. ಭಾನುವಾರ ಸಂಜೆ ಈರಣ್ಣ ಜಾಲಿಗಿಡದ ಎಂಬಾತನ ಮೇಲೆ ನಾಲ್ಕು ಕರಡಿಗಳು ಏಕಕಾಲಕ್ಕೆ ಮಾರಣಾಂತಿಕ ದಾಳಿ ನಡೆಸಿದ್ದು ಜನರು ಭಯಭೀತರಾಗಿದ್ದಾರೆ.

ಕೊಪ್ಪಳ ತಾಲೂಕಿನ ಹೊಸೂರು ಗ್ರಾಮದ ಈರಣ್ಣ ಸೋಮವಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಹುಲಿಗಿಗೆ ಪಾದಯಾತ್ರೆ ಬೆಳೆಸಿದ್ದ. ಆದರೆ, ಸಂಜೆ ಮನಸ್ಸು ಬದಲಾಯಿಸಿ ಕೊಪ್ಪಳಕ್ಕೆ ತೆರಳಲು ಇರಕಲ್ ಗಡಾ ಬಳಿ ತೆರಳುವಾಗ ನಾಲ್ಕು ಕರಡಿಗಳು ದಾಳಿ ಮಾಡಿವೆ.

ಮೈ, ಕೈ, ತಲೆ ಭಾಗಕ್ಕೆ ಬಲವಾಗಿ ಕಚ್ಚಿ, ತೀವ್ರವಾಗಿ ಗಾಯಗೊಳಿಸಿವೆ.‌ ಅಸ್ವಸ್ಥನಾಗಿ ಬಿದ್ದಿದ್ದಾತನನ್ನು ಸ್ಥಳದಲ್ಲಿದ್ದವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಹಾಧರಣಿ | ಕೃಷಿ ಉತ್ಪನ್ನಕ್ಕೆ ಖರ್ಚಿಗಿಂತ 50% ಆದಾಯ ಕೊಡುತ್ತೇವೆ ಎಂದಿದ್ದವರು ಉಲ್ಟಾ ಹೊಡೆದಿದ್ದಾರೆ: ವಿಜು ಕೃಷ್ಣನ್

“ಕೊಪ್ಪಳ ತಾಲೂಕು ಭಾಗದಲ್ಲಿ ಕರಡಿಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಇದನ್ನು ಕರಡಿ ಸಂರಕ್ಷಿತ ಪ್ರದೇಶವೆಂದು ಘೋಷಿಸಲು ಅರಣ್ಯ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಸರ್ಕಾರ ಅನುಮೋದನೆ ನೀಡಿಲ್ಲ. ಇತ್ತೀಚೆಗೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕರಡಿ ದಾಳಿ ತಡೆಗೆ ಅರಣ್ಯದ ಸುತ್ತ ತಂತಿಬೇಲಿ ಹಾಕುವಂತೆ ಮನವಿ ಸಲ್ಲಿಸಿದ್ದರು. ಆದರೆ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ” ಎಂದು ಸ್ಥಳೀಯರು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X