ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

Date:

Advertisements

ಮೋದಿ ಸರ್ಕಾರದಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ಮಹಿಳೆಯರು. ಹತ್ರಾಸ್, ಉನ್ನೋವೋದಲ್ಲಿ ನಡೆದ ಅತ್ಯಾಚಾರ, ಬಿಲ್ಕೀಸ್‌ ಬಾನೋ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಲ್ಲಿ ಇಂದಿಗೂ ನ್ಯಾಯ ಸಿಕ್ಕಿಲ್ಲ. ಆರೋಪಿಗಳನ್ನು ರಕ್ಷಿಸಲಾಗುತ್ತಿದೆ. ‘ಮಹಿಳೆಯರು ಇರುವುದೇ ಬೋಗಿಸಲಿಕ್ಕೆ’ ಅಂತ ಮೋದಿ ಸರ್ಕಾರ ಹೇಳಿದೆ. ಮೋದಿ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ ಎಂದು ಮಹಿಳಾ ಸಂಘಟನೆಗಳ ಮುಖಂಡೆ ಮೀನಾಕ್ಷಿ ಬಾಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ ಜನರ ಮಹಾಧರಣಿಯಲ್ಲಿ ಅವರು ಮಾತನಾಡಿದರು. “ಕೃಷಿಯಲ್ಲಿ ಮಹಿಳೆಯರ ದುಡಿಮೆ ಹೆಚ್ಚಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯ ಶ್ರಮವಿದೆ. ಕುಟುಂಬದ ನೊಗವನ್ನ ಮಹಿಳೆಯರು ಹೊತ್ತಿದ್ದಾರೆ” ಎಂದರು.

“ಮಹಿಳೆಯರು ನೋವನ್ನು ಅನುಭವಿಸಿಯೂ, ಜಗತ್ತನ್ನು ಸಂಭಾಳಿಸಿಕೊಂಡು ಬಂದಿದ್ದಾರೆ. ಪುರುಷರಿಗಿಂತ ಹೆಚ್ಚು ದುಡಿಯುವವರು ಮಹಿಳೆಯರು. ದುಡಿಯುವ ವರ್ಗದ ವಿಮೋಚನೆಯೊಂದಿಗೆ ಮಹಿಳೆಯರ ವಿಮೋಚನೆಯಾಗುತ್ತದೆ. ಮಹಿಳೆಯನ್ನು ಭೋಗದ ವಸ್ತುವೆಂದು ಮನುಸ್ಮೃತಿ ಹೇಳುತ್ತದೆ. ಮನುಸ್ಮೃತಿಯೇ ಮೋದಿ ಸರ್ಕಾರದ ಜೀವಾಳ” ಎಂದು ತಿಳಿಸಿದರು.

Advertisements

“ಹೆಣ್ಣು ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುವಾದ ಹೇಳುತ್ತದೆ. ಹೆಣ್ಣನ್ನು ಗಂಡು ರಕ್ಷಿಸುತ್ತಾನೆ ಎಂದು ಹೇಳುತ್ತದೆ. ಆದರೆ, ಮಹಿಳೆಗೆ ರಕ್ಷಣೆ ಎಲ್ಲಿದೆ. ಎಲ್ಲೆಡೆ, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ. ಮೋದಿ ಸರ್ಕಾರ ಅತ್ಯಾಚಾರಿಗಳನ್ನು ರಕ್ಷಿಸುತ್ತಿದೆ. ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬ್ರಿಜ್ ಭೂಷಣ್‌ ಸಿಂಗ್‌ನನ್ನು ಸರ್ಕಾರ ರಕ್ಷಿಸುತ್ತಿದೆ” ಎಂದು ಕಿಡಿಕಾರಿದರು.

“ಮಹಿಳಾ ಮಿಸಲಾತಿ ಮಸೂದೆಯನ್ನು ಅಂಗೀಕರಿಸಿ, ಮಹಿಳೆಯರ ಮತ ಪಡೆಯಲು ಮೋದಿ ಸರ್ಕಾರ ಹವಣಿಸುತ್ತಿದೆ. ಆದರೆ, ಅವರ ಕಾಯ್ದೆ ಆಟಕ್ಕುಂಟು-ಲೆಕ್ಕಕ್ಕಿಲ್ಲ ಎಂಬಂತಿದೆ. ಕಾಯ್ದೆಯನ್ನು ಜಾರಿಗೆ ತರಲು ಕನಿಷ್ಠ 10 ವರ್ಷ ಸತಾಯಿಸುತ್ತಾರೆ. ಅವರ ಹುನ್ನಾರ ಏನೆಂಬುದು ನನಗೆ ಗೊತ್ತಿಲ್ಲವೆಂದು ಸರ್ಕಾರ ಭಾವಿಸಿದೆ. ಮಹಿಳೆಯರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರ ಆಟ ದೇಶದ ಮಹಿಳೆಯರ ಮುಂದೆ ನಡೆಯುವುದಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಅರಿತುಕೊಳ್ಳಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X