ಉಡುಪಿ | ಎಪಿಎಂಸಿ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ನ.29ರಂದು ಅಹೋರಾತ್ರಿ ಧರಣಿ

Date:

Advertisements

ಎಪಿಎಂಸಿ ಅಧಿಕಾರಿಗಳ ಅವ್ಯವಹಾರ ಮತ್ತು ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಲು ಉಡುಪಿಯ ಎಪಿಎಂಸಿ ರಕ್ಷಣಾ ಸಮಿತಿ ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ವಿಜಯ್ ಕೊಡವೂರು ಹೇಳಿದರು. ನ್ಯಾಯ ಸಿಗುವವರೆಗೂ ಎಪಿಎಂಸಿ ಮುಂಭಾಗದಲ್ಲಿ ಧರಣಿ ಮಾಡುವುದಾಗಿ ಅವರು ಎಚ್ಚರಿಸಿದರು.

ಉಡುಪಿಯಲ್ಲಿ ಸೋಮವಾರದಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಐದು ಬೇಡಿಕೆಗಳನ್ನು ಇಟ್ಟುಕೊಂಡು ಈ ಅಹೋ ರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಒಂದು ನಿವೇಶನಕ್ಕೆ ₹8 ಲಕ್ಷ ಲಂಚ ಪಡೆದು ಅಂತಹ 11 ನಿವೇಶನಕ್ಕೆ ₹88 ಲಕ್ಷ ಲಂಚ ಪಡೆದ ಅಧಿಕಾರಿಗಳನ್ನು ಅಮಾನತು ಮಾಡಬೇಕು” ಎಂದು ಅವರು ಆಗ್ರಹಿಸಿದರು.

“ಕ್ಯಾನ್ಸರ್ ಪೀಡಿತ ವರ್ತಕನಿಂದ ₹250ರ ಪರವಾನಗಿಗಾಗಿ ₹40,000 ಲಂಚ ಪಡೆದ ಅಧಿಕಾರಿಗಳ ಅಮಾನತು ಮಾಡಬೇಕು. ಮರಣ ಹೊಂದಿ 3 ವರ್ಷವಾದರೂ ಆ ವ್ಯಕ್ತಿಯ ಹೆಸರಿನಲ್ಲಿಯೇ ಇಂದಿಗೂ ಗೋಡೌನ್‌ನ ಬಾಡಿಗೆ ಪಡೆಯುತ್ತಿರುವ ಅಧಿಕಾರಿಗಳ ಅಮಾನತು ಮಾಡಬೇಕು. ಕರ್ನಾಟಕದಲ್ಲಿಯೇ ಕೆಟ್ಟ ಎಪಿಎಂಸಿ ಪ್ರಾಂಗಣ ಎಂದು ಹೆಸರಾದ ಉಡುಪಿ ಎಪಿಎಂಸಿಯಲ್ಲಿ ಮೂಲ ಸೌಕರ್ಯಗಳಾದ ರಸ್ತೆ, ವಿದ್ಯುತ್, ಶೌಚಾಲಯ, ನೀರು ಮತ್ತು ಸ್ವಚ್ಛತೆ ವ್ಯವಸ್ಥೆ ಮಾಡಿಕೊಡದ ಅಧಿಕಾರಿಗಳನ್ನು ಅಮಾನತು ಮಾಡಬೇಕು” ಎಂದು ಅವರು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯನಗರ | ಎಷ್ಟೇ ಶಿಕ್ಷಣ ಪಡೆದರೂ ಸಂವಿಧಾನಾತ್ಮಕವಾಗಿ ಪ್ರಬುದ್ಧರಾಗುತ್ತಿಲ್ಲ; ಪ್ರೊ. ಚಿನ್ನಸ್ವಾಮಿ ಸೋಸಲೆ ಕಳವಳ

ಕೃಷಿ ಉತ್ಪನ್ನ ಮಾರಾಟಗಾರ ಒಕ್ಕೂಟದ ಅಧ್ಯಕ್ಷ ಸುಭಾಷಿತ್ ಕುಮಾರ್, ಎಪಿಎಂ‌ಸಿ ಮಾಜಿ ಸದಸ್ಯ ರಮಾಕಾಂತ್ ಕಾಮತ್, ರೈತ ಮೋರ್ಚ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಉಪ್ಪೂರು, ಫಯಾಜ್, ಪ್ರಭುಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X