ಆಲಮೇಲ | ಕಬ್ಬು ಸಾಗಿಸುವ ವಾಹನಗಳಿಂದ ಅಪಘಾತಗಳು; ಸಂಘಟನೆಗಳ ಪ್ರತಿಭಟನೆ

Date:

Advertisements

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಸರಹದ್ದಿನಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆ ಹಾಗೂ ಆಲಮೆಲ ತಾಲೂಕಿನ ಮನಿಲೀ ಶುಗರ್ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಉಂಟಾಗುತ್ತಿರುವ ರಸ್ತೆ ಅಪಘಾತಗಳನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು (ನ.27) ಪ್ರತಿಭಟನೆ ನಡೆಸಿದವು.

ಆಲಮೇಲ ತಾಲೂಕಿನ ಬಗಲೊರು ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಸಮತಾವಾದ ಮತ್ತು ಮಹರ್ಷಿ ವಾಲ್ಮೀಕಿ ಸಂಘಟನೆ, ಕನಕದಾಸ ಸಂಘಟನೆ, ಟಿಪ್ಪು ಸುಲ್ತಾನ ಸಂಘಟನೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಪ್ರತಿಭಟನೆ ಮಾಡಿ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಲಕರಾದ ಧರ್ಮಣ್ಣ ಎಂಟಮಾನ ಮಾತನಾಡಿ, ‘ಸುಮಾರು ವರ್ಷಗಳಿಂದ ಕಬ್ಬಿನ ವಾಹನಗಳು ಹಗಲು ಮತ್ತು ರಾತ್ರಿ ವೇಳೆಯಲ್ಲಿ ರಸ್ತೆ ಮೇಲೆ ಬರುವಾಗ ವಾಹನಗಳ ಶಬ್ದದಿಂದ ಹಿಂದಿನಿಂದ ಹಾರ್ನ್‌ ಹಾಕಿದರೂ ಕೇಳಿಸುವುದಿಲ್ಲ. ಆ ವಾಹನಗಳ ಹಿಂದುಗಡೆ ರೇಡಿಯಮ್ ಮಿಶ್ರಿತ ಸೂಚನಾ ಫಲಕವನ್ನು ಹಾಕದೆ ವಾಹನ ಚಲಾವಣೆ ಮಾಡುವುದರಿಂದ ವಾಹನ ಸವಾರರಿಗೆ ರಾತ್ರಿ ವೇಳೆಯಲ್ಲಿ ತುಂಬಾ ತೊಂದರೆಯಾಗುತ್ತಿದೆ’ ಎಂದರು.

Advertisements

‘ಅಪಘಾತ ಸಂಭವಿಸಲು ಇವು ಸಹ ಕಾರಣವಾಗಿವೆ. ಇದರಿಂದ ಅನೇಕ ಅಪಘಾತಗಳು ಸಂಭವಿಸಿ ಸಾವು, ನೋವು ಉಂಟಾಗಿವೆ. ಇತ್ತೀಚಿನ ಘಟನೆಯಲ್ಲಿ ಕುಳೆಕುಟಾಗಿ ಗ್ರಾಮದ ಹತ್ತಿರ ಪಂಕ್ಚರ್ ಆಗಿ ನಿಂತಿರುವ ಕಬ್ಬಿನ ವಾಹನಕ್ಕೆ ಎರಡು ಬಾರಿ ಬೇರೆ ವಾಹನ ಗುದ್ದಿ, ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಿಂಗಣ್ಣ ವಾಲಿಕಾರ, ಹಾವಣ್ಣ ಕಕ್ಕಳಮೇಲಿ, ರಾಹುಲ್ ಹೊಸಮನಿ, ಮೆಹಬೂಬ ಸಿಂದಗಿಕರ, ಸಿದ್ದಣ್ಣ ಐರೊಡಗಿ, ಸುರೇಶ್ ವಾಲಿಕಾರ, ಸದ್ದಾಂ ಜಮಾದಾರ, ಭೀಮರಾವ ಕಟ್ಟಿಮನಿ, ಲಕ್ಷ್ಮಣ ಗೌಂಡಿ, ಶೇಕರ ಮಗಾಣಗೆರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X