ಕಲಬುರಗಿ | ಹೊನಗುಂಟಾ ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಎಐಕೆಕೆಎಮ್‌ಎಸ್ ಆಗ್ರಹ

Date:

Advertisements

ಸುಮಾರು ಐದು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಹೊನಗುಂಟಾ ಗ್ರಾಮವು ಗ್ರಾಮ ಪಂಚಾಯತ್‌ ಕೇಂದ್ರವಾಗಿದೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಗ್ರಾಮ ಪಂಚಾಯಿತಿಯು ಸಂಪೂರ್ಣವಾಗಿ ವಿಫಲವಾಗಿದೆ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆಯ ಕಾರ್ಯದರ್ಶಿ ರಾಜೇಂದ್ರ ಅತನೂರ ಆಕ್ರೋಶ ವ್ಯಕ್ತಪಡಿಸಿದರು.

ಹೊನಗುಂಟಾ ಗ್ರಾಮಸ್ಥರಿಗೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಅಖಿಲ ಭಾರತ ರೈತ-ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಗ್ರಾಮ ಪಂಚಾಯತ್‌ ಎದುರುಗಡೆ ಪ್ರತಿಭಟಿಸಿ ಗ್ರಾ.ಪಂ. ಪಿಡಿಓಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು, ಸೂಕ್ತ ರಸ್ತೆ, ಬೀದಿ ದೀಪ, ಸಾರ್ವಜನಿಕ ಗ್ರಂಥಾಲಯ, ಮಹಿಳಾ ಶೌಚಾಲಯ ಹಾಗೂ ಗ್ರಾಮದ ನೈರ್ಮಲ್ಯ ಕಾಪಾಡುವಲ್ಲಿ ಗ್ರಾಮ ಪಂಚಾಯಿತಿ ಆಡಳಿತವು ಸೋತಿದೆ. ಮತ್ತೊಂದೆಡೆ ಉದ್ಯೋಗಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಕೆಲಸ ನೀಡುತ್ತಿಲ್ಲ. ಇದರಿಂದ ಗ್ರಾಮಸ್ಥರು ಉದ್ಯೋಗಕ್ಕಾಗಿ ನಗರಗಳಿಗೆ ಗೂಳೆ ಹೋಗುತ್ತಿದ್ದಾರೆ. ಕೂಡಲೇ ನಿರುದ್ಯೋಗ ಕಾರ್ಮಿಕರಿಗೆ ಮನರೇಗಾ ಕೆಲಸ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

Advertisements

“ದಶಕಗಳಿಂದ ವಾಸವಿರುವ ಇಲ್ಲಿನ ಜನರು ನಿಗದಿತವಾಗಿ ತಮ್ಮ ಮನೆಯ ತೆರಿಗೆ ಪಾವತಿಸಿದ್ದಾರೆ. ಆದರೆ  ಜನರು ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡಿದ್ದಾರೆಂದು ಹೇಳುತ್ತಿದ್ದಾರೆ. ಮುಗ್ಧ ಜನರ ಹಣ ದುರ್ಬಳಕೆ ಮಾಡಿಕೊಂಡು ಸರಕಾರಕ್ಕೆ ಹಾಗೂ ಜನರಿಗೆ ಮೋಸ ಮಾಡುತ್ತಿದ್ದಾರೆ. ಅಲ್ಲದೆ ಒಬ್ಬರ ಮನೆಯ ಹಕ್ಕು ಪತ್ರವನ್ನು ಮತ್ತೊಬ್ಬರ ಹೆಸರಿಗೆ ಮಾಡಿಕೊಟ್ಟು ಜನರನ್ನು ಆಂತಕಕ್ಕೆ ದೂಡಿದ್ದಾರೆ” ಎಂದು ಆರೋಪಿಸಿದರು.

ತಾವು ವಾಸಿಸುತ್ತಿರುವ ಮನೆಯು ಬೇರೆಯವರ ಹೆಸರಿನಲ್ಲಿರುವುದು ಕಂಡು ಗ್ರಾಮಸ್ಥರು ದಿಕ್ಕುತೋಚದೆ ಹಲವು ಬಾರಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯಿತ್ ಹಾಗೂ ಜಿಲ್ಲಾ ಪಂಚಾಯಿತಿಗೆ‌ ಮನವಿ ಸಲ್ಲಿಸಿ ತಪ್ಪು ಸರಿಪಡಿಸಲು ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು. ನಿರ್ಲಕ್ಷ್ಯ ವಹಿಸಿದರೆ ತೀವ್ರ ಹೋರಾಟ ಸಂಘಟಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

ಈ ಸಂದರ್ಭದಲ್ಲಿ ಪ್ರಮುಖರಾದ ನೀಲಕಂಠ ಹುಲಿ, ಚಂದ್ರು ಮರಗೋಳ, ದೇವರಾಜ ರಾಜೋಳ, ಮೌನೇಶ ರಾಜೋಳ, ದೀಪಣ್ಣ ಓಲೇ, ಭೀಮು ವಾಲಿಕರ, ಬಸಲಿಂಗಪ್ಪ ದಂಡಾ, ಬಾಬು ಆಡಿನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X