ಕೋಲಾರ | ಲಾಕಪ್‌ ಡೆತ್ ಪ್ರಕರಣ: ಪಿಎಸ್‌ಐ ಸೇರಿ ಮೂವರ ಅಮಾನತು

Date:

Advertisements

ಲಾಕಪ್‌ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಠಾಣೆಯ ಪಿಎಸ್‌ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಪೇದೆ ಮಂಜುನಾಥ್, ಮಹಾಂತೇಶ್ ಪೂಜಾರಿ ಎಂಬುವರನ್ನು ಅಮಾನತು ಮಾಡಲಾಗಿದೆ.

ಕಳ್ಳತನ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಮುನಿರಾಜು ಮತ್ತು ಬಾಲಾಜಿ ಎಂಬ ಯುವಕರನ್ನು ವಿಚಾರಣೆಗೆಂದು ಸೆಪ್ಟೆಂಬರ್ 17ರಂದು ಠಾಣೆಗೆ ಕರೆತಂದಿದ್ದರು. ಅವರನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೆ, ಬೇರೆ-ಬೇರೆ ಸ್ಥಳಗಳಲ್ಲಿ ಇರಿಸಿ, 15 ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.

Advertisements

ಆದರೆ, ಅಕ್ಟೋಬರ್ 1ರಂದು ಪೊಲೀಸ್‌ ಸುಪರ್ದಿಯಲ್ಲೇ ಮುನಿರಾಜು ಎಂಬವರು ಸಾವನ್ನಪ್ಪಿದ್ದರು. ಬಳಿಕ, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು. ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಅರೋಪಿಗಳನ್ನ ವಿಚಾರಣೆ ಮಾಡಿ, ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಿ ಕೋಲಾರ ಎಸ್‌ಒಇ ನಾರಾಯಣ ಅಮಾನತು ಮಾಡಿದ್ದಾರೆ.

ಮೂವರ ವಿರುದ್ಧವೂ ಎಫ್‌ಐಆರ್‌ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X