‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಟಿ ಪೂಜಾ ಗಾಂಧಿ

Date:

Advertisements

‘ಮುಂಗಾರು ಮಳೆ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ಪೂಜಾ ಗಾಂಧಿ ಅವರು ಕನ್ನಡ ಕಲಿತು ಇದೀಗ ಅಪ್ಪಟ ಕನ್ನಡತಿ ಆಗಿದ್ದಾರೆ. ನ.29 ರಂದು ಕುವೆಂಪು ಆಶಯದ ‘ಮಂತ್ರ ಮಾಂಗಲ್ಯ’ದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿರುವ ನಟಿ ಪೂಜಾ ಗಾಂಧಿ ಅವರು ಕನ್ನಡ ಓದಲು, ಬರೆಯಲು ಕಲಿತಿದ್ದಾರೆ. ಮಾಧ್ಯಮ ಮಿತ್ರರಿಗೆ ಮದುವೆ ಆಮಂತ್ರಣವನ್ನು ಸ್ವತಃ ಅವರೇ ಕನ್ನಡದಲ್ಲಿ ಬರೆದು ಕಳುಹಿಸಿದ್ದಾರೆ.

“ನ.29ರಂದು ಸಾಯಂಕಾಲ ಕುವೆಂಪು ಆಶಯದ ಮಂತ್ರ ಮಾಂಗಲ್ಯದ ಮೂಲಕ ವಿಜಯ್‌ ಘೋರ್ಪಡೆ ಅವರನ್ನು ಮದುವೆಯಾಗಲಿದ್ದೇನೆ. ನಮ್ಮನ್ನು ಹರಸಿ, ಆಶೀರ್ವದಿಸಿ” ಎಂದು ನಟಿ ಪೂಜಾ ಗಾಂಧಿ ಹೇಳಿದ್ದಾರೆ.

Advertisements

ಬೆಂಗಳೂರಿನ ಯಲಹಂಕದಲ್ಲಿ ಪೂಜಾ ಗಾಂಧಿ ಅವರ ವಿವಾಹ ನೆರವೇರಲಿದೆ. ವಿಜಯ್ ಅವರು ಬೆಂಗಳೂರಿನಲ್ಲಿ ತಮ್ಮದೇ ಲಾಜಿಸ್ಟಿಕ್ ಕಂಪನಿ ಹೊಂದಿದ್ದಾರೆ. ವಿಜಯ್ ಹಾಗೂ ಪೂಜಾ ಗಾಂಧಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಬೆಂಗಳೂರು 12

ಪೂಜಾ ಗಾಂಧಿ ಅವರು ಮೂಲತಃ ಉತ್ತರ ಪ್ರದೇಶದವರು. ‘ಮುಂಗಾರು ಮಳೆ’ ಸಿನಿಮಾ ಗೆದ್ದ ಬಳಿಕ ಅವರ ಖ್ಯಾತಿ ಹೆಚ್ಚಾಯಿತು. ಈ ಸಿನಿಮಾ ಬಳಿಕ ‘ಮಿಲನ’, ‘ಕೃಷ್ಣ’, ‘ದಂಡುಪಾಳ್ಯ’, ‘ಅಭಿನೇತ್ರಿ’ ಹೀಗೆ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ಪೂಜಾ ಗಾಂಧಿ ನಟಿಸಿದ್ದರು. ಇತ್ತೀಚೆಗೆ ‘ಸಂಹಾರಿಣಿ’ ಎಂಬ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತ್ತೊಂದು ಬೆಂಕಿ ಅವಘಡ; ಹೊತ್ತಿ ಉರಿದ ಶೂ, ಬಟ್ಟೆ ಗೋದಾಮು

2012ರಲ್ಲಿ ಪೂಜಾ ಗಾಂಧಿ ಅವರು ಉದ್ಯಮಿ ಆನಂದ್ ಗೌಡ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ವಿವಾಹಕ್ಕೂ ಮುನ್ನವೇ ಸಂಬಂಧ ಮುರಿದುಬಿದ್ದಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

Download Eedina App Android / iOS

X