ಚಾಮುಂಡೇಶ್ವರಿಗೆ ಐದು ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

Date:

Advertisements
  • ವೈಯಕ್ತಿಕವಾಗಿ ದೇವಿಗೆ ಹಣ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
  • ಶಾಸಕ ದಿನೇಶ ಗೂಳಿಗೌಡರಿಂದ ನಾಡದೇವಿಗೆ ಹಣ ಸಮರ್ಪಣೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಚಾಮುಂಡೇಶ್ವರಿ ದೇವಿಗೆ ಸಮರ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.

ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.

Advertisements

ಮೊದಲ ಕಂತು ಸಲ್ಲಿಸಿದ್ದ ಸಿಎಂ, ಡಿಸಿಎಂ

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ” ಎಂದಿದ್ದಾರೆ.

“ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ‌ ಹರಕೆ ತೀರಿಸಿದ್ದೆವು. ರಾಜ್ಯದ ಯಜಮಾನಿಯರ‌ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು” ಎಂದು ಹೆಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಚುನಾವಣೆ | ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ: ಸಿದ್ದರಾಮಯ್ಯ

“ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

“ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

5 ವರ್ಷವೂ ಯೋಜನೆ

“ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ. ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ” ಎಂದಿದ್ದಾರೆ.

“ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ. 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ. ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಕಿವಿಗೊಡಬೇಡಿ. ಕೇವಲ ಈ ಐದು ವರ್ಷವಲ್ಲ, ಮುಂದಿನ ಐದು ವರ್ಷವೂ ನಾವೇ ಅಧಿಕಾರದಲ್ಲಿರುತ್ತೇವೆ. ಮತ್ತೆ ಈ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X