ಧಾರವಾಡ | ಚಳಿಯ ಕೊರತೆ; ಸಂಕಷ್ಟದಲ್ಲಿ ಕಡಲೆ ಬೆಳೆದ ರೈತರು

Date:

Advertisements

ಮುಂಗಾರು ಮಳೆ ವೈಫಲ್ಯದಿಂದ ಮುಂಗಾರು ಬೆಳೆ ಕಳೆದುಕೊಂಡಿದ್ದ ಧಾರವಾಡ ಜಿಲ್ಲೆಯ ರೈತರಿಗೆ, ಇದೀಗ ಚಳಿಯ ಬರಗಾಲ ಎದುರಾಗಿದೆ.

ಹಿಂಗಾರು ಬೆಳೆಯ ನಿರೀಕ್ಷೆಯಲ್ಲಿ ರೈತರು ಬೇಗ ಬಿತ್ತನೆ ಮಾಡಿದ್ದು, ಶೇ.75 ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಮಾಡಲಾಗಿದೆ. ಆದರೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ತಾಪಮಾನ ಕಡಿಮೆಯಾಗದ ಕಾರಣ ಕಡಲೆ ಮತ್ತು ಮಾವಿನ ಇಳುವರಿ ಕಡಿಮೆ ಯಾಗುವ ಸಾಧ್ಯತೆ ಇದೆ.

ಈ ಎರಡೂ ಬೆಳೆಗಳಿಗೆ ತಂಪಾದ ವಾತಾವರಣ ಬೇಕು. ಆದರೆ, ಸದ್ಯದ ವಾತಾವರಣದಲ್ಲಿ ಉಷ್ಣತೆ ಹಾಗೇ ಇದೆ. ಡಿಸೆಂಬರ್‌ ಅಂತ್ಯದವರೆಗೆ ವಾತಾವರಣ ಬದಲಾಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಕಾಯುತ್ತಿದ್ದಾರೆ.

Advertisements

ಹಿಂಗಾರು ಮಳೆಯ ಭರವಸೆ ಇಟ್ಟು ಬಿತ್ತಿದ್ದರೈತರು ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಕ್ಷವನ್ನು ಬೋರ್‌ವೆಲ್‌ ನೀರು, ಹೊಳೆ ನೀರು, ಟ್ಯಾಂಕರ್‌ಗಳ ಮೂಲಕ ನೀರು ಹರಿಸಿ ಬೆಳೆ ಉಳಿಸಿಕೊಂಡಿದ್ದಾರೆ. ಈಗ ಚಳಿಗಾಲಕ್ಕೆ ಇರಬೇಕಿರುವಷ್ಟು ಚಳಿ ಬೀಳದೆ ಬೆಳೆ ಆರೋಗ್ಯವಾಗಿ ಬೆಳೆಯಲು ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಸ್ಥಳೀಯ ರೈತರು.

ಮುಂಗಾರು ಬೇಸಾಯಕ್ಕೂ ಹಿಂಗಾರು ಬೇಸಾಯಕ್ಕೂ ಇರುವ ವ್ಯತ್ಯಾಸವೆಂದರೆ ಮುಂಗಾರು ಬೆಳೆಗಳಿಗೆ ಬಿತ್ತನೆಯ ಸಮಯದಿಂದ ಕೊಯ್ಲು ಮಾಡುವವರೆಗೆ ಮಳೆ ಬೇಕು. ಹಿಂಗಾರು ಬಿತ್ತನೆ ಸಮಯದಲ್ಲಿ ಮಳೆಯಾದರೆ ಸಾಕು. ಆದರೆ, ಬೆಳೆ ಕೊಯ್ಲು ಆಗುವ ತನಕ, ಹವಾಮಾನವು ತಂಪಾಗಿರಬೇಕು. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಹವಾಮಾನವು ಬೆಚ್ಚಗಿರುತ್ತದೆ. ಬೆಳಗಿನ ಸಮಯದಲ್ಲಿ ಒಂದೆರಡು ಗಂಟೆಗಳ ಕಾಲ ಮಾತ್ರ ತಂಪಾದ ಹವಾಮಾನವಿರುತ್ತದೆ.

ಕೃಷಿ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ 2.5ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಲ್ಲಿ, 1.5ಲಕ್ಷ ಹೆಕ್ಟೇರ್‌ ಅಂದರೆ ಶೇ.75ರಷ್ಟು ಬಿತ್ತನೆಯಾಗಿದೆ. ಏಕೆಂದರೆ ಬಿತ್ತನೆ ಸಮಯದಲ್ಲಿ ಮಳೆ ಆಗಿರಲಿಲ್ಲ.

ಧಾರವಾಡ ಜಿಲ್ಲೆಯಲ್ಲಿ ಕಡಲೆ ಪ್ರಮುಖ ಹಿಂಗಾರಿ ಬೆಳೆಯಾಗಿದ್ದು, ರೈತರು ಒಂದು ಲಕ್ಷ ಹೆಕ್ಟೇರ್ ಗುರಿಯನ್ನು ಮೀರಿ, 1.5ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆ ಮಾಡಿದ್ದಾರೆ. 16,088 ಹೆಕ್ಟೇರ್ ಗುರಿಗೆ, 9,254 ಹೆಕ್ಟೇರ್‌ನಲ್ಲಿ ಗೋಧಿ ಬಿತ್ತನೆಯಾಗಿದೆ. ಉಳಿದ ಜಮೀನಿನಲ್ಲಿ ಜೋಳ ಮತ್ತಿತರ ಬೆಳೆಗಳನ್ನು ಬಿತ್ತಲಾಗಿದೆ.

ಆರ್ದ್ರತೆಯ ಕೊರತೆಯಿಂದ ಕಡಲೆ ಬೆಳೆ ಒಣಗುತ್ತಿದೆ ಮತ್ತು ಬೆಳೆಗೆ ಕೀಟಗಳು ಕಾಡುವ ಅಪಾಯವನ್ನು ರೈತರು ಎದುರಿಸುತ್ತಿದ್ದಾರೆ. ಮುಂಗಾರು ಬೆಳೆ ಕೈಗೆ ಸಿಗದಿದ್ದಕ್ಕೆ ತುಂಬಾ ಬೇಗ ಹಿಂಗಾರು ಬೆಳೆ ಬಿತ್ತಿದ್ದೇವೆ ಈಗ ಬೆಳೆ ಕೈಕೊಡುವ ಹಾಗಿದೆ, ಮುಂದೆ ಏನು ಮಾಡುವುದು ತೋಚದಂತಾಗಿದೆ ಎನ್ನುತ್ತಿದ್ದಾರೆ ರೈತರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X