ಬೆ. ಗ್ರಾಮಾಂತರ | ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ

Date:

Advertisements

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ.

ಲೀಲಾವತಿ ಅವರು ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದು, ಹಾಸಿಗೆ ಹಿಡಿದಿದ್ದಾರೆ. ಅವರು ತಾವು ವಾಸಿಸುತ್ತಿರುವ ಸೋಲದೇವನಹಳ್ಳಿಯಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು ಇಟ್ಟಿದ್ದರು. ಇದೀಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡಿದ್ದು, ಮಂಗಳವಾರ ಉದ್ಘಾಟನೆಗೊಂಡಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, “ಕೆಲ ದಿನಗಳ ಹಿಂದೆ ನಟಿ ಲೀಲಾವತಿ ಮತ್ತು ಅವರ ಮಗ ವಿನೋದ್ ರಾಜ್ ನಮ್ಮ ಮನೆಗೆ ಭೇಟಿ ನೀಡಿದ್ದರು. ಪಶು ಆಸ್ಪತ್ರೆ ನಿರ್ಮಾಣ ಮಾಡಿದ್ದೀವಿ. ಉದ್ಘಾಟನೆಗೆ ಬನ್ನಿ ಎಂದಿದ್ದರು. ಅವರಿಬ್ಬರೂ ಒಂದು ದೊಡ್ಡ ಸಂದೇಶ ಕೊಟ್ಟಿದ್ದಾರೆ. ಎಷ್ಟೇ ದುಡ್ಡಿದ್ದರೂ ಅವರಿಗೆ ಇರುವ ಮನಸ್ಸು ಯಾರಿಗೂ ಬರಲ್ಲ” ಎಂದಿದ್ದಾರೆ.

Advertisements

“ಲೀಲಾವತಿ ಅವರು ಬಹಳ ಶ್ರೀಮಂತರಲ್ಲ. ಆದರೆ, ಸಮಾಜಕ್ಕೆ ಕೊಡುಗೆ ಕೊಡಬೇಕೆಂಬ ವಿಚಾರದಲ್ಲಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಕಲಾವಿದರಿಗೆ ಪೆನ್ಶನ್ ಕೊಡಿ ಎಂಬ ಬೇಡಿಕೆಯನ್ನು ವಿನೋದ್ ಕೊಟ್ಟಿದ್ದಾರೆ. ಅದನ್ನು ಈಡೇರಿಸುವ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X