ಬೆಂಗಳೂರು | ಯುವತಿ ಮೇಲೆ ಅತ್ಯಾಚಾರ – ಜಾತಿ ನಿಂದನೆ; ಆರೋಪಿ ಬಂಧನ

Date:

Advertisements

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಮುದುವೆಯಾಗುವುದಾಗಿ ನಂಬಿಸಿ 7 ತಿಂಗಳ ಗರ್ಭಿಣಿಯಾದ ಬಳಿಕ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಕಾಮುಕ ಆರೋಪಿಯನ್ನು ಬೆಂಗಳೂರು ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಈ ಘಟನೆ ನಡೆದಿದೆ. 36 ವರ್ಷದ ವಿವಾಹಿತ ಮಹಿಳೆಯೊಬ್ಬರು ಖಾಸಗಿ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ, ಪರಿಚಯವಾದ ಮಹೇಶ ಎಂಬಾತ ಆ ಮಹಿಳೆಯ ಜತೆಗೆ ಸ್ನೇಹ ಬೆಳೆಸಿ ಬಳಿಕ ಪ್ರೀತಿ ಎಂದು ಆಕೆಯ ಹಿಂದೆ ಬಿದ್ದಿದ್ದಾನೆ.

ನೀನು ದಲಿತ ಜನಾಂಗಕ್ಕೆ ಸೇರಿದರೂ ಪರವಾಗಿಲ್ಲ, ನಿನ್ನ ಗಂಡನನ್ನು ಬಿಟ್ಟು ಬಾ, ನಾನು ನಿನ್ನನ್ನೂ ಮದುವೆಯಾಗುತ್ತೇನೆ ಎಂದು ಮಹೇಶ್ ಮಹಿಳೆಗೆ ಹೇಳಿದ್ದಾನೆ. ಮಹಿಳೆ ಇಷ್ಟವಿಲ್ಲ ಎಂದು ಹೇಳಿದ್ದರೂ ಬಿಟ್ಟುಬಿಡದೆ ಆಕೆಯ ಬೆನ್ನುಬಿದ್ದಿದ್ದಾನೆ.

ಈ ವಿಚಾರ ತಿಳಿದ ಮಹಿಳೆಯ ಪತಿ ಜಗಳ ಮಾಡಿ ಆಕೆಯನ್ನು ತೊರೆದಿದ್ದಾನೆ. ಇದೇ ಸಮಯವನ್ನು ಬಂಡವಾಳ ಮಾಡಿಕೊಂಡ ಆರೋಪಿ ಆಕೆಯ ಜತೆಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಮಹಿಳೆ ಗರ್ಭಿಣಿಯಾಗಿದ್ದಾಳೆ. ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾನೆ.

ಮಹಿಳೆ ಈ ವಿಚಾರವನ್ನು ಆರೋಪಿ ಮಹೇಶ ತಂಗಿಗೆ ತಿಳಿಸಿದ್ದಾರೆ. ಮಹೇಶನ ತಂಗಿ ಮಹಿಳೆಗೆ ಹೀನ ಜಾತಿಯವಳು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಈ ಘಟನೆ ಬಳಿಕ ಮಹೇಶ ಮತ್ತು ಮಹಿಳೆ ಇಬ್ಬರೂ ಬಾಡಿಗೆ ಮನೆ ಮಾಡಿ ಸಂಸಾರ ನಡೆಸಿದ್ದಾರೆ.

ಕೆಲ ದಿನಗಳ ಬಳಿಕ ಮಹೇಶ್ ಮನೆಗೆ ಬರುವುದನ್ನೇ ನಿಲ್ಲಿಸಿದ್ದಾನೆ. ಇದರಿಂದ ಅನುಮಾನಗೊಂಡ ಮಹಿಳೆ ಕೆಲವರನ್ನು ವಿಚಾರಿಸಿದಾಗ ಮಹೇಶಗೆ ಈಗಾಗಲೇ ಮದುವೆಯಾಗಿರುವ ವಿಚಾರ ತಿಳಿದುಬಂದಿದೆ. ಇದರಿಂದ ಮನನೊಂದು ಆರೋಪಿ ಮಹೇಶ್ ಹಾಗೂ ಆತನ ತಂಗಿ ವಿರುದ್ಧ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

ಮಹಿಳೆ ನೀಡಿದ ದೂರಿನ ಮೇಲೆ ಆರೋಪಿ ವಿರುದ್ಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ನೆಲಮಂಗಲ ಟೌನ್ ಪೊಲೀಸ್ ಅಧಿಕಾರಿಯೊಬ್ಬರು, “ದಲಿತ ಮಹಿಳೆಯೆಂದು ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಮೋಸ ಮಾಡಿದ್ದಾನೆ ಎಂದು ಮಹಿಳೆ ದೂರು ನೀಡಿದ್ದಾರೆ. ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X